News Karnataka Kannada
Thursday, May 02 2024
ಕ್ಯಾಂಪಸ್

ಕನ್ನಡ ಮಾಧ್ಯಮದಲ್ಲಿ ಕಲಿತದ್ದು ಪುಣ್ಯ: ಶಂಕರ ಹೆಗ್ಡೆ

Ajekaru
Photo Credit :

ಅಜೆಕಾರು: ಕನ್ನಡದ ಮಾಧ್ಯಮದಲ್ಲಿ ಕಲಿತದ್ದು ನನ್ನ ಪುಣ್ಯ. ಬದುಕಿನಲ್ಲಿ ಏನಾದರೂ ಸಾಧನೆ ಮಾಡಿದ್ದರೆ ಅದಕ್ಕೆ ಮಾತೃಭಾಷಾ ಶಿಕ್ಷಣವೇ ಕಾರಣ. ಕನ್ನಡ ಮಾಧ್ಯಮದ ಬಗ್ಗೆ ಕೀಳರಿಮೆ ಬೇಡ ಎಂದು ಹೆಗ್ಡೆ ಸೇವಾ ಸಂಘ ಮುಂಬಯಿ ಇದರ ನಿಕಟಪೂರ್ವ ಅಧ್ಯಕ್ಷ ಶಂಕರ ಹೆಗ್ಡೆ ಹೇಳಿದರು.

ಅವರು ೧೧೪ ವರ್ಷದ ಅಜೆಕಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಭಾಶಯ ದಿನಾಚರಣೆ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸದಾ ಹೊಸತನವನ್ನು ಹುಡುಕುವ ಡಾ.ಶೇಖರ ಅಜೆಕಾರು ಅವರು ರಜೆಗೆ ತೆರಳುವ ಮಕ್ಕಳಿಗೆ ಮನೋರಂಜನೆ, ಜ್ಷಾನ, ಸಿಹಿ ಊಟ ನೀಡಿ ಸಂತೋಷದಿಂದ ಕಳುಹಿಸುವ ವಿನೂತನ ಕಲ್ಪನೆ ಎಂದು ಅಭಿಪ್ರಾಯಪಟ್ಟರು.

ಮರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷ ಜ್ಯೋತಿ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹರೀಶ ನಾಯಕ್, ಮರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ಮಾಜಿ ಅಧ್ಯಕ್ಷೆ ಯಶೋದಾ ಶೆಟ್ಟಿ, ಜಾನ್ ಟೆಲಿಸ್, ಚರಿತ್ರಾ ಎಂ, ರಾಘವೇಂದ್ರ ಆಚಾರ್ಯ, ನಿವೃತ್ತ ಅಂಗನವಾಡಿ ಶಿಕ್ಷಕಿ ವಿಮಲಾ ನಾಯ್ಕ್, ವಿದ್ಯಾರ್ಥಿ ನಾಯಕ ಸ್ಕಂದ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು