ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಯಲವು ೨೦೨೧-೨೨ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೋಮಾ ಕೊರ್ಸ್ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಾತಿ ಅರ್ಜಿಯನ್ನು ವಿಶ್ವವಿದ್ಯಾಲಯದ ಅಂತರ್ಜಾಲದಲ್ಲಿ ಪ್ರಕಟಿಸಿದೆ.
ಈ ಕೋರ್ಸುಗಳು ವಿಶ್ವವಿದ್ಯಾಯಲದ ಕ್ಯಾಂಪಸ್, ಶಂಕರಘಟ್ಟ, ಸ್ನಾತಕೋತ್ತರ ಕೇಂದ್ರ, ಕಡೂರು ಹಾಗೂ ಚಿಕ್ಕಮಗಳೂರು, ಸೈಹಾದ್ರಿ ಕಾಲೇಜು ಆವರಣ, ಶಿವಮೊಗ್ಗ ಮತ್ತು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ ಲಭ್ಯವಿದ್ದು, ಸಂಯೋಜಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಕೂಡ ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರವೇಶಾತಿಯಲ್ಲಿ ಆಫ್ಲೈನ್ ಮೂಲಕ ತುಂಬಲಾಗುವುದು.
ಎಲ್ಲಾ ಸ್ನಾತಕೋತ್ತರ ಕೋರ್ಸುಗಳು ಸಿ.ಬಿ.ಸಿ.ಎಸ್ ಸ್ಕೀಂ ಮಾದರಿಯಲ್ಲಿರುತ್ತದೆ. ಎಂ.ಬಿ.ಎ/ಎA.ಸಿ.ಎ ಪದವಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪರೀಕ್ಷೆಯ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುತ್ತದೆ. ಭರ್ತಿಯಾಗದೇ ಉಳಿಯುವ ಸ್ಥಾನ ಇದ್ದಲ್ಲಿ ವಿಶ್ವವಿದ್ಯಾಲಯವು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸೂಚನೆ: ಭಾಷಾ ವಿಷಯಗಳ ಕೋರ್ಸುಗಳಿಗೆ ಕನಿಷ್ಟ ಪ್ರವೇಶಾತಿ ೦೫ ವಿದ್ಯಾರ್ಥಿಗಳು ಹಾಗೂ ಕೋರ್ಸುಗಳು ಕನಿಷ್ಟ ಪ್ರವೇಶಾತಿ ೧೦ ವಿದ್ಯಾರ್ಥಿಗಳು ಇದ್ದು, ಕನಿಷ್ಟ ಸಂಖ್ಯೆಗಿAತಲೂ ಕಡಿಮೆ ಪ್ರವೇಶಾತಿ ಆಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಸಮೀಪದ ಸ್ನಾತಕೋತ್ತರ ಕೇಂದ್ರಗಳಲ್ಲಿ ಖಾಲಿ ಇದ್ದಲ್ಲಿ ವಿದ್ಯಾರ್ಥಿಯ ಒಪ್ಪಿಗೆಯೊಂದಿಗೆ ವರ್ಗಾಯಿಸಲಾಗುವುದು. ಒಂದು ವೇಳೆ ವಿದ್ಯಾರ್ಥಿ ಪ್ರವೇಶಾತಿ ರದ್ದುಗೊಳಿಸಲು ಕೋರಿದಲ್ಲಿ ಅಂತಹ ವಿದ್ಯಾರ್ಥಿಗೆ ಶುಲ್ಕ ಮರುಭರಿಕೆ ಮಾಡಲಾಗುವುದು.
ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…
ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…
ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…
ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…