News Karnataka Kannada
Saturday, May 04 2024
ಕ್ಯಾಂಪಸ್

ತುಮಕೂರು ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಬಗ್ಗೆ ಕಾರ್ಯಾಗಾರ

Tumkur
Photo Credit :

ತುಮಕೂರು : ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯವಿರುವಸಾಮರ್ಥ್ಯ, ಕೌಶಲ್ಯಗಳನ್ನು, ಜೀವನದ ಮೌಲ್ಯಗಳು, ಸಂಶೋಧನ ಪ್ರವೃತ್ತಿ ಹೆಚ್ಚಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆಯಾಗಿದೆ. ಈ ಹೊಸ ರಾಷ್ಟಿçÃಯಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಲು ಎಲ್ಲ ಶಿಕ್ಷಕರು, ಪೋಷಕರು,ವಿದ್ಯಾರ್ಥಿಗಳ ಮತ್ತು ವಿಶ್ವವಿದ್ಯಾನಿಲಯಗಳ ಸಹಕಾರ ಅಗತ್ಯ ಎಂದು ರಾಜ್ಯ ಉನ್ನತಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಗೋಪಾಲಕೃಷ್ಣ ಜೋಶಿಕರೆನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ – ೨೦೨೦ರ ಅನುಷ್ಠಾನದ  ಸಂಬಂಧ ಹೆಚ್ಚಿನ ಅರಿವು ಮೂಡಿಸುವಉದ್ದೇಶದಿಂದ ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಶಿವಕುಮಾರ ಸ್ವಾಮೀಜಿಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರುಮಾತನಾಡಿದರು. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಯುವಕರನ್ನುಸಜ್ಜುಗೊಳಿಸುವ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಅಗತ್ಯವಾಗಿದೆ. ಇದಕ್ಕೆ ನಾವು ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಜಾಗತಿಕ ಮಟ್ಟದ ಶಿಕ್ಷಣ ಮತ್ತುಕೌಶಲ್ಯಗಳ ಅಗತ್ಯವಿದ್ದು ನೂತನ ಶಿಕ್ಷಣ ನೀತಿಯಲ್ಲಿ ಈ ವಿಷಯಗಳೆಲ್ಲವೂ ಒಳಗೊಂಡಿದೆ ಎಂದು ತಿಳಿಸಿದರು.ವಿದ್ಯಾರ್ಥಿಗಳು ಕೋಡಿಂಗ್, ಕೃತಕ ಬುದ್ಧಿಮತ್ತೆ, ಕ್ಲೌಡ್ ,  ಕಂಪ್ಯೂಟಿಂಗ್ ಡೇಟಾ ಸೈನ್ಸ್ಮತ್ತು ರೊಬೊಟಿಕ್ ಮೊದಲಾದ ಪರಿಕಲ್ಪನೆಗಳನ್ನು ಹೊಸ ಶಿಕ್ಷಣ ನೀತಿಯಲ್ಲಿಕಲಿಯಲಿದ್ದಾರೆ. ಶಿಕ್ಷಣತಜ್ಞರು, ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆಮಾರ್ಗದರ್ಶನ ನೀಡುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು