ಮಂಗಳೂರು ; ಇಲ್ಲಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫಯರ್ ಆ್ಯಂಡ್ ಸೇಫ್ಟಿ ಇಂಜಿನಿಯರಿಂಗ್ನಲ್ಲಿ ದಿನಾಂಕ 24 ಜುಲೈ 2021ರಂದು ವಿದ್ಯಾರ್ಥಿಗಳು ಮತ್ತು ನಾಗರಿಕರಿಗಾಗಿ ವಿಶೇಷ ಕೋವಿಡ್-19 ಪ್ರಥಮ ಲಸಿಕೆ ಅಭಿಯಾನ ಏರ್ಪಡಿಸಲಾಯಿತು. ವೆಲೆನ್ಸಿಯಾ ಕಾರ್ಪೋರೇಟರ್ ಸಂದೀಪ್ ಗರೋಡಿ ಮತ್ತು ಜೆಪ್ಪಿನಮೊಗರು ಕಾರ್ಪೋರೇಟರ್ ವೀಣಾ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಮನೋಜ್ ಮತ್ತು ನಾಗರಿಕ ಮುಖಂಡರ ಸಹಯೋಗದೊಂದಿಗೆ ನಡೆದ ಈ ಅಭಿಯಾನದಲ್ಲಿ ವಿದ್ಯಾರ್ಥಿಗಳು ಮತ್ತು ನಾಗರಿಕರು ಸೇರಿದಂತೆ 200ಕ್ಕಿಂತಲೂ ಅಧಿಕ ಕೋವಿಡ್-19 ಪ್ರಥಮ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಯಶವಂತ್ ಗೋಪಾಲ್ ಶೆಟ್ಟಿ ಮತ್ತು ಜಗದೀಶ್ ಪಂಪ್ವೆಲ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಜೇಶ್ ಮತ್ತು ತಾಲೂಕು ಆರೋಗ್ಯ ಅಧಿಕಾರಿ ಡಾ| ಸಂಜಯ್ ಭಂಡಾರಿಯವರ ನೇತೃತ್ವದಲ್ಲಿ ಸಂಸ್ಥೆಯ ಗ್ರಂಥಾಲಯದಲ್ಲಿ ಕೋವಿಡ್ -19 ಮುಂಜಾಗೃತಾ ಕ್ರಮಗಳು ಮತ್ತು ಸಾಮಾಜಿಕ ಅಂತರ ಪಾಲಿಸುವುದರಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿ ಯಶಸ್ವಿಗೊಳಿಸಿದರು.
ಸರಕಾರ ಮತ್ತು ಜಿಲ್ಲಾಡಳಿತದ ನಿರ್ದೇಶನದಂತೆ ನಿರ್ಬಂಧಿತ ದಿನದೊಳಗಾಗಿ 2ನೇ ಹಂತದ ಲಸಿಕೆಯನ್ನು ಕೂಡ ಇದೇ ವಿದ್ಯಾಸಂಸ್ಥೆಯಲ್ಲಿ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ವಿನೋದ್ ಜ್ಹಾನ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…