News Karnataka Kannada
Friday, May 03 2024
ಮಂಗಳೂರು

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲು ಮಂಜೂರು

Arebhashe
Photo Credit :

ಮಂಗಳೂರು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಕಳೆದ ಎರಡು ವರ್ಷಗಳಿಂದ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರಬೇಕೆಂಬ ಒತ್ತಾಸೆಯನ್ನು ಸರಕಾರಕ್ಕೆ ವ್ಯಕ್ತಪಡಿಸಿತ್ತು. ಸತತ ಪ್ರಯತ್ನದ ಫಲವಾಗಿ ಕರ್ನಾಟಕ ಘನ ಸರಕಾರ 2022ರ ಬಜೆಟ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಮಂಜೂರು ಮಾಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಖುಷಿ ವ್ಯಕ್ತಪಡಿಸಿದೆ.

ಅಕಾಡೆಮಿಯು ಕರ್ನಾಟಕ ಘನ ಸರ್ಕಾರದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಸನ್ಮಾನ್ಯ  ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು ಮಾನ್ಯ ಸಂಸದ  ಡಿ.ವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸನ್ಮಾನ್ಯ ಸಚಿವರುಗಳಾದ  ಅಂಗಾರ ಎಸ್,  ವಿ.ಸುನಿಲ್ ಕುಮಾರ್,  ಸಿ.ಎನ್.ಅಶ್ವತ್ಥನಾರಾಯಣ,  ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್, ಸಂಸದರು ಮತ್ತು ಕೇಂದ್ರ ಸರ್ಕಾರದ ಮಾನ್ಯ ಮಂತ್ರಿಗಳು ಶ್ರೀಮತಿ ಶೋಭಾ ಕರಂದ್ಲಾಜೆ, ಶಾಸಕರುಗಳಾದ  ಸಂಜೀವ ಮಠಂದೂರು,  ಕೆ.ಜಿ. ಬೋಪಯ್ಯ ಇವರಗಳ ಮೂಲಕ ಘನಸರಕಾರಕ್ಕೆ ಮನವಿಯನ್ನು ಸಲ್ಲಿಸಿ, ಅರೆಭಾಷೆ ಸಂಶೋಧನಾ ಕೇಂದ್ರವನ್ನು ಕಾರ್ಯರೂಪಕ್ಕೆ ತರಲು ಸಹಕರಿಸಿರುತ್ತಾರೆ. ಈ ಬಗ್ಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಅಕಾಡೆಮಿ ಕೃತಜ್ಞತೆ ವ್ಯಕ್ತಪಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು