ಮಾ.19ರಂದು ‘ಪ್ರಬಂಧಮಂಜೂಷಾ’ ಕೃತಿ ಲೋಕಾರ್ಪಣೆ

ಚಾಮರಾಜಪೇಟೆ: ಸಂಸ್ಕೃತ ವಿಶ್ವವಿದ್ಯಾಲಯದ ಆವರಣದಲ್ಲಿ ಮಾ.19ರಂದು ಚಾಮರಾಜಪೇಟೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಓಮನ್, ಮಸ್ಕತ್‌ನ ಬಸವ ಬಳಗದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಕನ್ನಡ ಕಾಯಕ ವರ್ಷಾಚರಣೆ ಪ್ರಯುಕ್ತ ಅಂತರಾಷ್ಟ್ರೀಯ ಸರಣಿ ಅಂತರ್ಜಾಲ ವಿಚಾರ ಗೋಷ್ಠಿಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ‘ಪ್ರಬಂಧಮಂಜೂಷಾ’ ಕೃತಿ ಲೋಕಾರ್ಪಣೆಗೊಳ್ಳಲಿದೆ.

ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲ ಮತ್ತು ಜೀವನೋಪಾಯ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜಪೇಟೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕಾ.ಇ ದೇವನಾಥನ್ ವಹಿಸಿಕೊಳ್ಳಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರು ನಾಡೋಜ ಡಾ. ಮಹೇಶ ಜೋಶಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿ ಹಾಗೂ ವಸ್ತು ಪ್ರದರ್ಶನದ ಉದ್ಘಾಟಕರಾಗಿ ಭಾಗಿಯಾಗಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಸು. ಹಾನಗಲ್ಲ ಹಾಗೂ ಬಸವ ಬಳಗ ಮಸ್ಕತ್, ಒಮನ್‌ನ ಭಾರತೀಯ ಸಾಮಾಜಿಕ ವೇದಿಕೆಯ ಮಾಜಿ ಸಲಹೆಗಾರರು ಹಾಗೂ ಸೇವಾಕರ್ತರು ಬೀಮ ನೀಲಕಂಠರಾವ ಹಂಗರೆ ಭಾಗಿಯಾಗಲಿದ್ದಾರೆ.

Gayathri SG

Recent Posts

ಕುಂಪಲದಲ್ಲಿ ಇಬ್ಬರು ಮಕ್ಕಳ ತಂದೆ ನೇಣಿಗೆ ಶರಣು; ಪತ್ನಿಯೂ ಆತ್ಮಹತ್ಯೆಗೆ ಯತ್ನ

ಇಬ್ಬರು ಮಕ್ಕಳ ತಂದೆ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಸಂಭವಿಸಿದೆ. ಘಟನೆ ಬೆನ್ನಲ್ಲೇ ಪತ್ನಿಯೂ ಆತ್ಮಹತ್ಯೆ…

3 mins ago

ಬಟ್ಟೆ ತೊಳೆಯುತ್ತಿದ್ದ ಹೆಂಡತಿಯನ್ನು ಕೊಚ್ಚಿ ಕೊಲೆ : ಗಂಡನ ಮೇಲೆ ಶಂಕೆ

ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಂಡೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ…

4 mins ago

ನಾನೆಲ್ಲೂ ಓಡಿ ಹೋಗಿಲ್ಲ, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಿ: ಎಚ್.ಡಿ. ರೇವಣ್ಣ

ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ…

10 mins ago

ಶೈಕ್ಷಣಿಕ ಸಾಧನೆಗಿಂತ ನನ್ನ ಮೀಸೆಯಿಂದಾಗಿ ಹೆಚ್ಚು ಟ್ರೋಲ್‌ ಆಗಿದ್ದೇನೆ : ಟಾಪರ್‌ ಹುಡುಗಿ

98.50 ಪ್ರತಿಶತ ಅಂಕದೊಂದಿಗೆ ಯುಪಿ ಬೋರ್ಡ್ 10ನೇ ತರಗತಿಯ ಟಾಪರ್ ಆಗಿ ಹೊರಹೊಮ್ಮಿರುವ ಪ್ರಾಚಿ ನಿಗಮ್ ತಮ್ಮ ಮುಖದ ಕೂದಲಿನ…

27 mins ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ…

56 mins ago

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.…

1 hour ago