News Karnataka Kannada
Monday, May 06 2024
ಕ್ಯಾಂಪಸ್

ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ- ಪ್ರೊ .ವೈ ಎಸ್ ಸಿದ್ದೇಗೌಡ

New Project 2021 11 27t080926.455
Photo Credit :

ತುಮಕೂರು: ಸಂವಿಧಾನದ ಆಶಯಗಳಿಗೆ ತಕ್ಕಂತೆ ನಡೆಯೋಣ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್ (ಪ್ರೊ)ವೈ ಎಸ್ ಸಿದ್ದೇಗೌಡ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ತುಮಕೂರು ವಿ.ವಿ. ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಕಲಾ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗ ಶುಕ್ರವಾರ ಏರ್ಪಡಿಸಿದ್ದ‘ಸಂವಿಧಾನ ದಿನ’ದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆಪುಷ್ಪನಮನ ಸಲ್ಲಿಸಿ ಮಾತನಾಡಿ, ಸಂವಿಧಾನದ ತತ್ವ ಆರ್ದಶಗಳನ್ನುಪಾಲಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಬಾಳು ಮತ್ತು ಸಮಪಾಲು ಎಂದು ಉಲ್ಲೇಖಿಸಿದ್ದಾರೆ. ಅದರಂತೆ ಸಮಾಜದ ಎಲ್ಲಾ ವರ್ಗದ ಜನರಿಗೂ ಕೂಡ ನ್ಯಾಯ ದೊರಕಿಸಿಲು ಶ್ರಮಿಸಿದ್ದಾರೆ. ನಾವು ಸಂವಿಧಾನ ಮಂತ್ರವನ್ನು ಪ್ರತಿನಿತ್ಯ ಜಪಿಸಬೇಕು ಎಂದರು.

ಡಾ. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಜಿ.ಬಸವರಾಜ ಮಾತನಾಡಿ, ಭಾರತದ ಸಂವಿಧಾನದ ಪ್ರಸ್ತಾವನೆಯು ಜಾತ್ಯಾತೀತ,ಪ್ರಜಾಸತಾತ್ಮಕ ಗಣರಾಜ್ಯದ ಅಂಶಗಳನ್ನೊಳಗೊಂಡಿದೆ. ಎಲ್ಲರಿಗೂರಾಜಕೀಯ, ಆರ್ಥಿಕ ಮತ್ತು ಧಾರ್ಮಿಕ ಸ್ಥಾನಮಾನಗಳನ್ನು ಹಂಚಿಕೆಮಾಡಲಾಗಿದೆ. ಮಿಶ್ರ ಆರ್ಥಿಕ ವ್ಯವಸ್ಥೆಯಲ್ಲಿ ದೇಶವನ್ನು ಮುನ್ನಡೆಸುತ್ತಿದ್ದು, ಸಮಾಜವಾದಿ ಮತ್ತು  ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ ಎಂದರು.  ಪರೀಕ್ಷಾಂಗ ಕುಲಸಚಿವ ಪ್ರೊ. ನಿರ್ಮಲ್‌ರಾಜು ಮಾತನಾಡಿ, ಭಾರತದ ಸಂವಿಧಾನವು ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡುವುದರ ಮೂಲಕ ಸದೃಢ ಸಮಾಜಕ್ಕೆ ಭಧ್ರ ಬುನಾದಿಯನ್ನು ಹಾಕಿದೆ. ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕವಾದ ಕಾನೂನುಗಳನ್ನು ರೂಪಿಸಲಾಗಿದೆ ಎಂದರು.
ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ರಾಮಚಂದ್ರಪ್ಪ,ನುಡಿದಂತೆ ನಡೆಯುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಗೌರವ ಎಂದರು. ರಾಜ್ಯ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಪರೀಕ್ಷಾಂಗ
ಉಪಕುಲಸಚಿವರಾದ ಡಾ. ಗುಂಡೇಗೌಡ ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು