News Karnataka Kannada
Saturday, May 04 2024
ಕ್ಯಾಂಪಸ್

ಸರ್ವರ ಏಳಿಗೆಗಾಗಿ ಕನ್ನಡದ ಜಾಗೃತಿ ಇಂದಿನ ಅಗತ್ಯವಾಗಿದೆ-ಡಾ. ಬಿ.ಪಿ.ಸಂಪತ್ ಕುಮಾರ

New Project 2021 10 29t204317.719
Photo Credit :

ಬೆಳ್ತಂಗಡಿ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯಲ್ಲಿ ನಡೆದ ಗೀತ ಗಾಯನ ಕಾರ್ಯಕ್ರಮದಲ್ಲಿ
ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಪಿ.ಸಂಪತ್ ಕುಮಾರ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ’ ಸರ್ವರ ಏಳಿಗೆಗಾಗಿ ಕನ್ನಡದ ಜಾಗೃತಿ ಇಂದಿನ ಅಗತ್ಯವಾಗಿದೆ. ಇಂತಹ ಜಾಗೃತಿಯನ್ನು ಸರಕಾರ ಜನರಲ್ಲಿ ಮೂಡಿಸುತ್ತಿರುವುದು ಶ್ಲಾಘನೀಯ ವಾದುದು. ಎಂದೆಂದಿಗೂ ಕನ್ನಡತನ ನಮ್ಮ ಉಸಿರಾಗಿರಬೇಕು’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಸತೀಶ್ಚಂದ್ರ ಎಸ್. ಸಂಕಲ್ಪ ವಿಧಿಯನ್ನು ಭೋದಿಸಿದರು. ನಾವು ಯಾವುದೇ ಭಾಷೆಯನ್ನು ಕಲಿತರು ಕನ್ನಡ ನಾಡು ನುಡಿಯ ಮೇಲೆ ಅಭಿಮಾನ ಹೊಂದಿರಬೇಕು. ಅದರ ರಕ್ಷಣೆಗಾಗಿ ಸದಾ ಕಂಕಣಬದ್ದರಾಗಿರಬೇಕು. ಸರಕಾರದ ಇಂತಹ ಕಾರ್ಯಕ್ರಮಗಳಿಗೆ ನಾವೆಲ್ಲಾ ಒಮ್ಮನಸ್ಸಿನಿಂದ ಕೈ ಜೋಡಿಸಬೇಕು’ ಎಂದರು
೩೦ ವಿದ್ಯಾರ್ಥಿಗಳು ಸೇರಿ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಡುಗಳನ್ನು ಹಾಡಿದರು.
ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಸೇರಿ ೧೫೦ ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾಲೇಜಿನ ಕನ್ನಡ ಸಂಘ ಹಾಗೂ ಸಾಂಸ್ಕೃತಿಕ ಸಂಘ ಸೇರಿ ಕಾರ್ಯಕ್ರಮ ಸಂಯೋಜಿಸಿದ್ದರು.
ಡಾ. ಸುಧೀರ ಕೆ.ವಿ. ವಂದನೆಗಳನ್ನು ಸಲ್ಲಿಸಿದರು. ಡಾ. ರವಿಶಂಕರ್ ಜಿ.ಕೆ. ಕಾರ್ಯಕ್ರಮ ನಿರೂಪಿಸಿದರು.‌
ಅದೇ ರೀತಿ ಬೆಳ್ತಂಗಡಿ ತಾಲೂಕು‌ ಕಚೇರಿಯಲ್ಲಿ ತಹಸೀಲ್ದಾರ್ ಮಹೇಶ್ ಜೆ. ಅವರ ನೇತ್ರತ್ವದಲ್ಲಿ ಗೀತ ಗಾಯನ ನಡೆಯಿತು.
ತಾಲೂಕು ಕಚೇರಿಯ ಎಲ್ಲಾ ಸಿಬ್ಬಂದಿಗಳು ಗೀತಾ ಗಾಯನದಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು