ಸಂತ ಅಲೋಶಿಯಸ್‌ನಲ್ಲಿ 144ನೇ ವಾರ್ಷಿಕೋತ್ಸವಾಚರಣೆ

ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸಂತ ಅಲೋಶಿಯಸ್‌ ಪರಿಗಣಿತ ವಿಶ್ವವಿದ್ಯಾಲಯದ 144ನೇ
ವಾರ್ಷಿಕೋತ್ಸವ – ʼಸಂವರ್ದನʼ ಎಂಬ ಧ್ಯೇಯದೊಂದಿಗೆ ದಿನಾಂಕ 12ನೇ ಏಪ್ರಿಲ್ 2024ರಂದು ವಿಶ್ವವಿದ್ಯಾನಿಲಯ
ಆವರಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಫ್ರೊ. ಡಾ. ಎಂ. ಎಸ್.‌ ಮೂಡಿತ್ತಾಯ ಮಾತನಾಡಿ, ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಣದ ಜೊತೆಜೊತೆಗೆ ಕ್ರೀಡೆ, ಸಾಂಸ್ಕೃತಿಕ ವಿಷಯಗಳಂತಹ ಪಠ್ಯೇತರ ಚಟುವಟಿಕೆಗಳನ್ನು ಅಳವಡಿಸಿದಾಗ ಮಾತ್ರ ಅದು ನಿಜವಾದ ಮೌಲ್ಯಾಧಾರಿತ ಜೀವನ ಹಾಗೂ ಅಭಿವೃದ್ದಿ ಪಥದೆಡೆಗೆ ಕೊಂಡೊಯ್ಯಲು ಸಹಕಾರಿಯಾಗುತ್ತದೆ.

ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಯೊಬ್ಬನ ಭವಿಷ್ಯವು ಆತನ ಸಬಲೀಕರಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ  ಪಾತ್ರವಹಿಸುತ್ತದೆ. ಅಂತಿಮ ಪದವಿ ವಿದ್ಯಾರ್ಥಿಗಳು ಬಹಳ ಶ್ರಮವಹಿಸಿ ತಮ್ಮ ಮುಂದಿನ ಭವಿಷ್ಯವನ್ನು ಇಂದೇ ರೂಪಿಸಿಕೊಳ್ಳಬೇಕು. ಮುಂದೊಂದು ದಿನ ಜೀವವನದಲ್ಲಿ ಯಾವುದೇ ಮರು-ಪರೀಕ್ಷೆಗಳು, ಕಾರ್ಯಯೋಜನೆಗಳು ಇರುವುದಿಲ್ಲ. ವಾಸ್ತವ ಜಗತ್ತಿನ ಸವಾಲುಗಳನ್ನು ಎದುರಿಸಲು ಇಂದೇ ನಿರ್ಣಯಗಳನ್ನು ಕೈಗೊಳ್ಳಬೇಕು. ಜೀವನದಲ್ಲಿ ತೊಡಕುಗಳುಂಟಾದಾಗ ಅದಕ್ಕೆ ಪರಿಹಾರವನ್ನು ನಾವೇ ಕಂಡುಕೊಂಡು ನಮ್ಮಲ್ಲಿ ಆತ್ಮ ವಿಶ್ವಾಸವನ್ನು ಹೆಚ್ಚಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂತ ಅಲೋಶಿಯಸ್‌ ಶಿಕ್ಷಣ ಸಂಸ್ಥೆಗಳ ವರಿಷ್ಠಾಧಿಕಾರಿ ವಂ.ಮೆಲ್ವಿನ್‌ ಜೋಸೆಫ್‌ ಪಿಂಟೋ ಎಸ್.‌ ಜೆ. ಮಾತನಾಡಿ, ವಿಶ್ವಾಸದೆಡೆಗೆ ನಾವು ಯಾವಗಲೂ ನಂಬಿಕೆ ಇಡಬೇಕು. ಪ್ರತಿಯೊಬ್ಬರಿಗೂ ಕೃತಜ್ಞತಾಭಾವದಿಂದ ಇದ್ದು ನಮ್ಮೆಲ್ಲರ ಕನಸನ್ನು ನನಸು ಮಾಡುವಲ್ಲಿ ಸಹಕರಿಸಬೇಕು ಎಂದರು.

ಪರೀಕ್ಷಾಂಗ ಕುಲಸಚಿವರಾದ ಡಾ. ಆಲ್ವಿನ್ ಡೇಸಾ, ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ರೊನಾಲ್ಡ್ ನಜರೆತ್,
ಹಣಕಾಸು ಅಧಿಕಾರಿ, ವಂ. ಫಾ. ವಿನ್ಸೆಂಟ್ ಪಿಂಟೋ, ವಿವಿಧ ಬ್ಲಾಕಿನ ನಿರ್ದೇಶಕರುಗಳಾದ, ವಂ. ಡಾ. ಮೆಲ್ವಿನ್ ಸನ್ನಿ
ಪಿಂಟೋ, ಡಾ. ಡೆನ್ನಿಸ್ ಫೆರ್ನಾಂಡಿಸ್, ಡಾ. ಲೋವೀನಾ ಲೋಬೊ, ಡಾ. ನಾರಾಯಣ ಭಟ್, ಡಾ. ಆಶಾ ಅಬ್ರಾಹಂ,
ಡಾ. ಚಾರ್ಲ್ಸ್ ಫುರ್ಟಾಡೊ, ಕಾರ್ಯಕ್ರಮ ಸಂಸಹಯೋಜಕರಾದ ಡಾ. ರತನ್ ತಿಲಕ್ ಮೊಹಂತ, ವಿದ್ಯಾರ್ಥಿ ನಾಯಕ,
ಕ್ರಿಸ್ಟನ್ ಜೋಶುವಾ ಮಿನೇಜಸ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂತ ಅಲೋಶಿಯಸ್‌ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ವಂ. ಡಾ. ಪ್ರವೀಣ್‌ ಮಾರ್ಟೀಸ್‌ ಎಸ್.‌ ಎಜೆ. ವಾರ್ಷಿಕ ವರದಿಯನ್ನು ಮಂಡಿಸಿದರು.

ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಉಪನ್ಯಾಸಕರಾದ ಡಾ. ಮೋನಾ ಮೆಂಡೋನ್ಸಾ ಮತ್ತು ಮನೋಜ್ ಡೈಸನ್ ಫೆರ್ನಾಂಡಿಸ್ ಸಭಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಾದ ದಿಯಾ ಮಸ್ಕರೇನ್ಹಸ್, ಚಿರಾಗ್ ಬಜಾಲ್, ಲೆನ್ವಿನ್, ವಿನಯ್ ಮಾಯೇಕರ್ ಮತ್ತು
ಶೈನಾ ಡಿಸೋಜ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಡಾ. ರತನ್ ತಿಲಕ್ ಮೊಹಂತ ವಂದಿಸಿದರು.

Ashika S

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

11 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

39 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

44 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

57 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

1 hour ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

1 hour ago