ಕೊಡಿಯಲ್ ಬೈಲ್: ಸಂತ ಅಲೋಶಿಯಸ್ ಕಾಲೇಜು, ಹಿರಿಯ ಪ್ರಾಥಮಿಕ ಶಾಲೆ ಕೊಡಿಯಲ್ ಬೈಲ್ ಇಲ್ಲಿ ನವೆಂಬರ್ 1ರಂದು 67ನೇ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲೆಯ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆಯಾಗಿರುವ ಮಂಗಳಾ ರೈಯವರು ವಹಿಸಿಕೊಂಡರು. ತಮ್ಮ ಭಾಷಣದಲ್ಲಿ ಕನ್ನಡ ನಾಡು ನುಡಿಗಳ ಏಳಿಗೆ ನಾವೆಲ್ಲರೂ ಒಂದಾಗಿ ಶ್ರಮಿಸಬೇಕು. ಕನ್ನಡ ಭಾಷೆಯನ್ನು ಮಾತನಾಡಬೇಕು. ಕನ್ನಡ ಪುಸ್ತಕ ಓದಬೇಕು ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಮಧುರವಾದ ಕನ್ನಡ ಗೀತೆಗಳ ಗಾಯನ ನಡೆಯಿತು.
ವಿದ್ಯಾರ್ಥಿಗಳು ಕನ್ನಡದ ಇಂಪಾದ ಹಾಡುಗಳಿಗೆ ನೃತ್ಯ ಮಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಈ ಸುಂದರ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜೊಸ್ವೀಟಾ ನೊರೊನಾ, ಶಾಲಾ ನಾಯಕ ಅಭೀಶ್ ಉಪನಾಯಕ ಲಗನ್ ಜೆ,ಸ್ ಉಪಸ್ಥಿತರಿದ್ದರು. 7ನೇ ತರಗತಿಯ ಪೂರ್ಣೇಶ್ ಕನ್ನಡ ರಾಜೋತ್ಸವದ ಬಗ್ಗೆ ಎಲ್ಲರಿಗೂ ವಿವರಿಸಿದನು. ಕುಮಾರಿ ಸಂಜನಾ 5ನೇ ತರಗತಿ ಹಾಗೂ ಅಶ್ವಿನಿ 5ನೇ ತರಗತಿ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಸಾರಾ ಎಲ್ಲರಿಗೂ ವಂದಿಸಿದಳು.
ರತನ್ ಆರ್ ಭಟ್, ಮನ್ವಿತ್,ಪ್ರಿನ್ಸ್ ಆಲಿಶ್, ಆರುಷ್, ಕೆ ಆನೀಶ್, ಆದರ್ಶ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಈ ಸುಂದರ ಕಾರ್ಯ ಕ್ರಮಕ್ಕೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಪೋಷಕರು ಸಾಕ್ಷಿಯಾದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…
“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…
ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್ನಲ್ಲಿರುವ ದೆಹಲಿ…
ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಹಣಕಾಸು ಸಚಿವೆ…