‘ಸಾಮಾಜಿಕ ಹೊಣೆಗಾರಿಕೆಯೊಂದಿಗೆ ರಚನಾತ್ಮಕ ಪರಿಹಾರ ಸಾಧ್ಯ’

ಉಜಿರೆ, ಜೂ.6: ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ವೈಜ್ಞಾನಿಕ ಸಾಮಾಜಿಕ ಹೊಣೆಗಾರಿಕೆಯೊಂದಿಗಿನ ರಚನಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯವಿದೆ ಎಂದು ಇಂಡಿಯನ್ ನಾಷನಲ್‌ ಯಂಗ್‌ ಅಕಾಡೆಮಿ ಆಫ್ ಸೈನ್ಸಸ್ ಸದಸ್ಯ ಡಾ. ಹೆಚ್. ಎಸ್. ಎಸ್. ರಾಮಕೃಷ್ಣ ಮಟ್ಟೆಅಭಿಪ್ರಾಯಪಟ್ಟರು.

ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗ ಮತ್ತುಇಂಡಿಯನ್ ನಾಷನಲ್‌ ಯಂಗ್‌ ಅಕಾಡೆಮಿ ಆಫ್ ಸೈನ್ಸಸ್‌ ಜಂಟಿಯಾಗಿ ‘ಮಾಲಿಕ್ಯುಲರ್‌ ಡಾಕಿಂಗ್ ಮತ್ತು ಎಲೆಕ್ಟ್ರೋ-ಅನಾಲಿಟಿಕಲ್ ತಂತ್ರಗಳು’ ಕುರಿತು ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸಾಮಾಜಿಕ ಸಮಸ್ಯೆಗಳಿಗೆ ವಿಜ್ಞಾನ ವಲಯವು ಪರಿಹಾರ ಒದಗಿಸಿಕೊಡುವ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದೆ. ಸಾಮಾಜಿಕ ಬದುಕಿನ ಪ್ರತಿ ಹಂತಗಳನ್ನೂ ಸೂಕ್ಷ್ಮವಾಗಿ ಗಮನಿಸಿ ವೈಜ್ಞಾನಿಕ ಅಧ್ಯಯನ ನಡೆಸಬೇಕಿದೆ. ಈ ದೃಷ್ಟಿಯಿಂದರ ಸಾಯನಶಾಸ್ತ್ರ ಸಂಶೋಧನೆಯ ಕಡೆಗೆ ಸಂಶೋಧನಾರ್ಥಿಗಳನ್ನು ಆಕರ್ಷಿಸುವ ಕೆಲಸ ವ್ಯಾಪಕವಾಗಿ ನಡೆಯಬೇಕಿದೆ ಎಂದು ಹೇಳಿದರು.

ವೈಜ್ಞಾನಿಕ ಸಂಶೋಧನೆ ಕೇವಲ ಪ್ರಯೋಗಾಲಯಗಳಿಗೆ ಮಾತ್ರ ಸೀಮಿತವಾಗಬಾರದು. ದೈನಂದಿನ ಜೀವನದ ಪ್ರತಿಯೊಂದು ಕಾರ್ಯ ಚಟುವಟಿಕೆಗಳಿಗೆ ಅನ್ವಯಗೊಂಡು ಇದರ ವ್ಯಾಪ್ತಿದೊಡ್ಡದಾಗಬೇಕು. ಹಾಗಾದಾಗ ಮಾತ್ರ ಸಮಾಜದ ಬಿಕ್ಕಟ್ಟುಗಳಿಗೆ ವಿಜ್ಞಾನವು ಸಾಮಾಜಿಕ ಹೊಣೆಗಾರಿಕೆಯ ಪ್ರಜ್ಞೆಯೊಂದಿಗಿನ ಮಹತ್ವದ ಪರಿಹಾರವನ್ನುಒದಗಿಸಬಹುದುಎಂದು ಹೇಳಿದರು.

ವಿದ್ಯಾರ್ಥಿಗಳು ಸದಾ ಅನ್ವೇಷಣೆ ನಡೆಸುತ್ತಿರಬೇಕು. ಪ್ರತಿಯೊಂದು ವಿಷಯದಕುರಿತು ಮಾಹಿತಿಕಲೆಹಾಕುತ್ತಿರಬೇಕು. ಸೂಕ್ತವೆನಿಸುವ ವಿಷಯ ಯಾವುದೆಂದು ಅರಿತು ಅದರ ಕುರಿತು ಅಧ್ಯಯನ ಮುಂದುವರಿಸಬೇಕು. ದೇಶದ ಪ್ರತಿಷ್ಠಿತ ಸಂಶೋಧನಾ ಕೇಂದ್ರಗಳಲ್ಲಿ ಅಧ್ಯಯನ ನಡೆಸಿ ಸಂಶೋಧನಾ ವಲಯದಲ್ಲಿನ ಆಸಕ್ತಿ ಹೆಚ್ಚಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ ಮಾತನಾಡಿದರು. ಆರೋಗ್ಯ, ಹವಾಮಾನ, ಆಹಾರ ಉತ್ಪಾದನಾ ವಲಯಗಳಲ್ಲಿನ ಸವಾಲುಗಳಿಗೆ ಮಾಲಿಕ್ಯುಲರ್‌ಡಾಕಿಂಗ್ ಮತ್ತುಎಲೆಕ್ಟ್ರೋ-ಅನಾಲಿಟಿಕಲ್‌ ತಂತ್ರಗಳು ಸೂಕ್ತ ಪರಿಹಾರ ಒದಗಿಸುತ್ತವೆ. ಆದ್ದರಿಂದ ಈ ವಿಷಯದ ಕುರಿತ ಸಂಶೋಧನೆ ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿದರು.ಕುತೂಹಲದ ಮನೋಭಾವವು ಎಲ್ಲಾ ವಿಜ್ಞಾನಗಳ ತಾಯಿ. ಜಗತ್ತಿನ ಪ್ರತಿ ಆವಿಷ್ಕಾರಕ್ಕೆ ಕುತೂಹಲ ಮೂಲ ಕಾರಣವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಕುತೂಹಲದ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ಕೇಂದ್ರದ ಡೀನ್‌ ಡಾ. ವಿಶ್ವನಾಥ ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ ಡಾ.ಸೌಮ್ಯ ಬಿ.ಪಿ ಸ್ವಾಗತಿಸಿದರು. ವಿದ್ಯಾರ್ಥಿನಿ ಸೌಜನ್ಯ ಶೆಟ್ಟಿಕಾರ್ಯಕ್ರಮ ನಿರೂಪಿಸಿದರು. ಅನುರಾಧಾ ಮತ್ತು ತಂಡದವರು ಪ್ರಾರ್ಥಿಸಿದರು. ಮತ್ತೊಬ್ಬ ಸಂಯೋಜಕಿ ಡಾ.ನಫೀಸತ್ ವಂದಿಸಿದರು.

Gayathri SG

Recent Posts

ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿ ಪ್ರಜ್ವಲ ಯೋಜನೆ : ಕೈ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಮಹಿಳೆಯರಿಗೆ ಉಜ್ವಲ ಯೋಜನೆ ಗ್ಯಾಸ್ ಬದಲಾಗಿದೆ ಪ್ರಜ್ವಲ ಯೋಜನೆ ಸಿಕ್ಕಿದೆ ಎಂದು ಪ್ರಜ್ವಲ ರೇವಣ್ಣ…

7 mins ago

ಪಿಹೆಚ್‌ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಪಿಹೆಚ್‌ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.

26 mins ago

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ: ಸುಪ್ರೀಂ

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ.

42 mins ago

ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್​​ ಶಾ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್​​ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…

1 hour ago

ತಾಪಮಾನ ಏರಿಕೆ: ದೇಹಕ್ಕೆ ಪ್ರತಿದಿನ 2-3 ಲೀಟರ್​ ನೀರು ಅತ್ಯಗತ್ಯ

ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…

2 hours ago

ಚಿನ್ನದ ಬೆಲೆಯಲ್ಲಿ ಇಳಿಕೆ : ಇಂದಿನ ಚಿನ್ನ ಬೆಳ್ಳಿ ದರ ಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ…

2 hours ago