ಕಾಂತಾವರ: ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ಜೂ. 16ರಂದು 8ನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರ್ವಾಭಿಮುಖಗೊಳ್ಳುವ ಮತ್ತು ತಮ್ಮನ್ನು ತಾವು ಸೃಜನಾತ್ಮಕವಾಗಿ ಕಲಿಕೆಗೆ ತೊಡಗಿಸಿಕೊಳ್ಳುವ ಉದ್ದೇಶದಿಂದ ದೃಷ್ಟಿಕೋನ ಎಂಬ ಚಿಂತನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಸ್ಟರ್ ಜಾನೆಟ್ ರವರು ವಿದ್ಯಾರ್ಥಿಗಳ ಕಲಿಕೆಯಲ್ಲಿ ತಮ್ಮನ್ನು ತಾವು ಅಣಿಗೊಳಿಸಲು ಧನಾತ್ಮಕ ಆಲೋಚನೆಗಳು ತುಂಬಾ ಮುಖ್ಯ ಎನ್ನುವುದನ್ನು ಕೆಲವೊಂದು ಚಟುವಟಿಕೆಯನ್ನು ಮಾಡಿಸುತ್ತಾ ವಿದ್ಯಾರ್ಥಿಗಳಲ್ಲಿರುವ ಋಣಾತ್ಮಕ ಆಲೋಚನೆಗಳನ್ನು ತೊರೆದು ಹಾಕಿದರು. ವಿದ್ಯಾರ್ಥಿಗಳು ತುಂಬಾ ಆಸಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ್ ಕುಮಾರ್, ಆಡಳಿತಾಧಿಕಾರಿಯಾದ ಮಮತ ಶರ್ಮ , ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವಿನ್ಯಾ ಹಾಗೂ ಪ್ರೌಢ ಶಾಲೆಯ ಪ್ರಾಂಶುಪಾಲರಾದ ಶ್ರೀಪ್ರಸಾದ್ ರವರು ಉಪಸ್ಥಿತರಿದ್ದರು. ಪ್ರಕೃತಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಉಪನ್ಯಾಸಕಿಯಾದ ಶೈಲಜಾರವರು ಎಲ್ಲರಿಗೂ ವಂದಿಸಿದರು.