News Karnataka Kannada
Monday, May 13 2024
ಕ್ಯಾಂಪಸ್

ಅಡ್ಯನಡ್ಕ: ‘ಸಾಹಿತ್ಯ ಸಂಭ್ರಮ-2’ ಚುಟುಕು ಸಾಹಿತ್ಯ ರಚನೆ ತರಬೇತಿ ಕಾರ್ಯಕ್ರಮ

Adyanadka: 'Sahitya Sambhrama-2' short literature writing training programme
Photo Credit : News Kannada

ಅಡ್ಯನಡ್ಕ: ಅಡ್ಯನಡ್ಕದ ಜನತಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ.) ಬಂಟ್ವಾಳ ಘಟಕ ಇವರ ಸಹಯೋಗದಲ್ಲಿ “ಸಾಹಿತ್ಯ ಸಂಭ್ರಮ- 2” ಪ್ರಯುಕ್ತ ಚುಟುಕು ಸಾಹಿತ್ಯ ರಚನೆ ತರಬೇತಿ ಕಾರ್ಯಕ್ರಮವು ಜುಲೈ 22ರಂದು ನಡೆಯಿತು.

ನಿವೃತ್ತ ಮುಖ್ಯ ಶಿಕ್ಷಕ, ಸಂಘಟಕ ಭಾಸ್ಕರ ಅಡ್ವಳ ಅವರು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಹಿತಿ, ಪತ್ರಕರ್ತ ಜಯಾನಂದ ಪೆರಾಜೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಚುಟುಕು ಸಾಹಿತ್ಯ ರಚನೆಯ ಬಗ್ಗೆ ತರಬೇತಿ ನೀಡಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ಗೌರವಾಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ವಿಟ್ಲ ವಲಯ ಪ್ರತಿನಿಧಿ ಹಾಗೂ ಬೊಳಂತಿಮೊಗರು ಸರಕಾರಿ ಪ್ರೌಢಶಾಲೆಯ ಅಧ್ಯಾಪಕ ಅನಿಲ್ ವಡಗೇರಿ ಸ್ವಾಗತಿಸಿ, ಪ್ರಸ್ತಾವಿಸಿದರು. ಜನತಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಅವರು ಉಪಸ್ಥಿತರಿದ್ದರು.

ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ. ಅವರು ಕಾರ್ಯಕ್ರಮ ನಿರೂಪಿಸಿ, ಜನತಾ ಹಿರಿಯ ಪ್ರಾಥಮಿಕ ಶಾಲೆ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯೋಪಾಧ್ಯಾಯ ಪ್ರಶಾಂತ್ ಮುಳಿಯ ಅವರು ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು