News Karnataka Kannada
Monday, April 29 2024
ಕ್ಯಾಂಪಸ್

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ದಿನಾಚರಣೆ

Ambedkar Day at Mani Balavikasa English Medium School
Photo Credit : News Kannada

ಬಂಟ್ವಾಳ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ಸಲ್ಲಿಸಲಾಯಿತು.

ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ ಮಾತನಾಡಿ, ಬಡಕುಟುಂಬದಲ್ಲಿ ಜನಿಸಿದ ಅಂಬೇಡ್ಕರ್‌  ಸಮಾಜಮುಖೀ ಚಿಂತನೆಗಳನ್ನು ಮೈಗೂಡಿಸಿಕೊಂಡ ಸಾಧನೆಗಳ‌ ಹರಿಕಾರರು, ಅವರ ಅಪಾರ ಜ್ಞಾನದಿಂದ ಇಡೀ ಜಗತ್ತು ಮೆಚ್ಚುವ ಭಾರತದ ಸಂವಿಧಾನವನ್ನು ರಚಿಸಿದ ಮಹನೀಯರು ಎಂದ ಅವರು, ಅಂಬೇಡ್ಕರರು ನೀಡಿದ ಕೊಡುಗೆಗಳ ಬಗ್ಗೆ‌ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ವಿಜಯಲಕ್ಷ್ಮಿ, ಉಪಮುಖೋಪಾಧ್ಯಯಿನಿ ಮೋಹಿನಿ ರೈ ,ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಶೋಭ ಪ್ರಾರ್ಥಿಸಿದರು. ಶಿಕ್ಷಕಿ ಐಡಾ ಲೋಬೋ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು