News Karnataka Kannada
Tuesday, May 07 2024
ಮಂಗಳೂರು

ಬಂಟ್ವಾಳ: ಇತಿಹಾಸದ ಅರಿವು ಪ್ರತಿಯೊಬ್ಬರಿಗೂ ಇರಬೇಕು- ಮಂಜುನಾಥ್ ಎಚ್.ಎಲ್.

Bantwal: Everyone should be aware of history: Manjunath H.L. Manjunath
Photo Credit : By Author

ಬಂಟ್ವಾಳ: ಇತಿಹಾಸದ ಅರಿವು ಇತಿಹಾಸದ ವಿದ್ಯಾರ್ಥಿಗಳ ಸಹಿತ ಪ್ರತಿಯೊಬ್ಬರಿಗೂ ಇರಬೇಕು ಎಂದು ಮೈಸೂರು ವಿಭಾಗೀಯ ಪತ್ರಾಗಾರ ಕಛೇರಿಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಎಚ್.ಎಲ್. ಅವರು ಹೇಳಿದರು.

ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ವಿಭಾಗೀಯ ಪತ್ರಾಗಾರ ಕಛೇರಿ, ಮೈಸೂರು ಹಾಗೂ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಕಟ್ಟೆ ಇತಿಹಾಸ ವಿಭಾಗ ಇವರ ಸಹಯೋಗದಲ್ಲಿ ಗುರುವಾರ ಆರಂಭಗೊಂಡ ಚಾರಿತ್ರಿಕ ದಾಖಲೆಗಳಲ್ಲಿ ದಕ್ಷಿಣ ಕನ್ನಡದ ಇತಿಹಾಸ ಎಂಬ ವಿಷಯದ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಇತಿಹಾಸವನ್ನು ಹಿರಿಯರ ಮೂಲಕ ಸಂಗ್ರಹಿಸಿ ಇತಿಹಾಸವನ್ನು ಮರುಸೃಷ್ಟಿಸುವ ಕಾರ್ಯವನ್ನು ಪತ್ರಾಗಾರ ಇಲಾಖೆ ನಡೆಸುತ್ತಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸಂದೇಶ್ ಶೆಟ್ಟಿ ,ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಪೂಜಾರಿ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಪತ್ರಕರ್ತ ಮೌನೇಶ್ ವಿಶ್ವಕರ್ಮ, ಮೇಜರ್ ರಾಘವ ಬಿ., ನಾರಾಯಣ ನಾಯಕ್, ಕಾಲೇಜಿನ ಮತ್ತು ವಿವಿಧ ಕಾಲೇಜುಗಳ ಉಪನ್ಯಾಸಕರು ಉಪಸ್ಥಿತರಿದ್ದರು

ಕುವೆಂಪು ಭಾಷಾ ಭಾರತಿಯ ಮಾಜಿ ಅಧ್ಯಕ್ಷ ಡಾ. ಗಿರೀಶ್ ಭಟ್ ಸ್ವಾಗತಿಸಿದರು.ವಿಚಾರ ಸಂಕಿರಣದ ಸಂಚಾಲಕ ಡಾ.ಸುಂದ್ರೇಶ್ ಎನ್. ಪ್ರಸ್ತಾವನೆಗೈದರು. ಸಹಸಂಚಾಲಕ ಹನುಮಂತಯ್ಯ ಜಿ.ಎಚ್. ವಂದಿಸಿದರು. ಸುಭಾಷ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು