News Karnataka Kannada
Monday, May 06 2024
ಮಂಗಳೂರು

ಬೆಳ್ತಂಗಡಿ: ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು, ದೇಶಪ್ರೇಮವನ್ನು ಬೆಳೆಸುತ್ತದೆ

Belthangady: Scouts Guides activities inculcate discipline, patriotism and honesty in children
Photo Credit :

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ನಡೆದ ಸ್ಕೌಟರ್, ಗೈಡರ್. ಕಬ್ ಮಾಸ್ಟರ್ ಮತ್ತು ಫ್ಲೋಕ್ ಲೀಡರ್ ಗಳ ಪುನಶ್ಚೇತನ ಶಿಬಿರವು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲ್ ಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ಈ ಶಿಬಿರವನ್ನು ಉದ್ಘಾಟನೆಯನ್ನು ಸಂಸ್ಥೆಯ ಉಪ ಪ್ರಾಂಶುಪಾಲರಾದ ಉದಯಕುಮಾರ್ ಬಿ ಇವರು ಉದ್ಘಾಟಿಸಿ ” ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ಮಕ್ಕಳಲ್ಲಿ ಶಿಸ್ತು ,ದೇಶಪ್ರೇಮ ಮತ್ತು ಪ್ರಾಮಾಣಿಕತೆಯನ್ನು ಬೆಳೆಸುತ್ತದೆ, ಇಂತಹ ಚಟುವಟಿಕೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತೆ ಶಿಕ್ಷಕರಾದ ನಾವು ಮಾಡಬೇಕು ಹಾಗೂ ಇದರ ಮಹತ್ವವನ್ನು ಪೋಷಕರಿಗೆ ತಿಳಿ ಹೇಳಬೇಕು ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಇಲ್ಲಿನ ಉಪಪ್ರಾಂಶುಪಾಲರಾದ ಉದಯ ಕುಮಾರ್ ರವರು ಹೇಳಿದರು.

ಪುನಶ್ಚೇತನ ಶಿಬಿರವು ತಾವು ತಿಳಿದಿರುವ ವಿಷಯಗಳನ್ನು ನೆನಪಿಸಿಕೊಳ್ಳಲು ಮತ್ತು ಹೊಸ ವಿಷಯಗಳನ್ನು ತಿಳಿಯಲು ಸಹಕಾರಿಯಾಗುತ್ತದೆ. ಆದ್ದರಿಂದ ಇಂತಹ ಶಿಬಿರಗಳಲ್ಲಿ ಹೆಚ್ಚಿನ ಶಿಕ್ಷಕರು ಭಾಗವಹಿಸುವುದು ಅಗತ್ಯ ಎಂಬುದಾಗಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ರವರು ತಿಳಿಸಿದರು.

ವೇದಿಕೆಯಲ್ಲಿ ಜೊತೆ ಕಾರ್ಯದರ್ಶಿ ಜೋಯ್ಸ್ ತಾವ್ರೋ, ಜಿಲ್ಲಾಸಹಾಯಕ ಆಯುಕ್ತರುಗಳಾದ ಜೆರಾಲ್ಡ್ ಫೆರ್ನಾಂಡಿಸ್ ಮಾಲಾಡಿ ಮತ್ತು ದತ್ತಾತ್ರೇಯ ಗೊಲ್ಲ ಮೇಲಂತಬೆಟ್ಟು, ಪುಂಜಾಲಕಟ್ಟೆ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನ ಮೊದಲಾದವರು ಉಪಸ್ಥಿತರಿದ್ದರು. ಅಕ್ಕಮ್ಮ A.L.T( G) ಸ್ವಾಗತಿಸಿದರು.ಕೋಶಾಧಿಕಾರಿ ಸುಜಾತ H. W. B(S)ರವರು ಧನ್ಯವಾದ ಸಮರ್ಪಿಸಿದರು.ಕಾರ್ಯದರ್ಶಿ ಶಾಂತಾರಾಮ ಪ್ರಭುA.L.T(S)ರವರು ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು