News Karnataka Kannada
Saturday, May 04 2024
ಮಂಗಳೂರು

ಬೆಳ್ತಂಗಡಿ: ಸಾಮರ್ಥ್ಯ ಸಂವರ್ಧನೆಗೆ ಕ್ರೀಡೆ ಅತಿ ಮುಖ್ಯ – ರವಿಶಂಕರ್ ವಿ. ಎಸ್.

Belthangady: Sports is very important for capacity building- Ravishankar V. S.
Photo Credit : News Kannada

ಬೆಳ್ತಂಗಡಿ: ದೈಹಿಕ ಆರೋಗ್ಯ ಮಾನಸಿಕ ಆರೋಗ್ಯಕ್ಕೂ ಕ್ರೀಡೆ ಅತಿ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಕ್ರೀಡಾ ಸ್ಪೂರ್ತಿಯಿಂದ ಎಲ್ಲಾ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸವೂ ಇದರಿಂದ ಸಾಧ್ಯ. ಸಾಮರ್ಥ್ಯ ಸಂವರ್ಧನೆಗೆ ಕ್ರೀಡೆ ಅತಿ ಮುಖ್ಯ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ. ಎಸ್ ಹೇಳಿದರು.

ಇವರು ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಚಾರ್ಯ ಪ್ರೊ.ದಿನೇಶ ಚೌಟ ಹಾಗೂ ಅಭ್ಯಾಗತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಅವರು ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.

ದೇಶ ಹಾಗೂ ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದವರನ್ನು , ಗುಂಪು ಸ್ಪರ್ಧೆಗಳಲ್ಲಿ ಹಾಗೂ ಪಥ ಸಂಚಲನ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಮೊದಲು ಎಲ್ಲಾ ತರಗತಿ ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಮಟ್ಟದ ಆಟಗಾರ್ತಿ ಸಿಂಚನಾ ಕ್ರೀಡಾ ಶಪಥಗೈದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಕ್ರೀಡಾಜ್ಯೋತಿ ಬೆಳಗಿಸಿದರು.

ಕನ್ನಡ ಭಾಷಾ ಉಪನ್ಯಾಸಕ ಡಾ.ರಾಜೇಶ್ ಬಿ . ಸ್ವಾಗತಿಸಿದರು. ಉಪನ್ಯಾಸಕರಾದ ಮಹಾವೀರ ಜೈನ್ ಹಾಗೂ ದೀಕ್ಷಿತ್ ರೈ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಧನ್ಯವಾದ ಅರ್ಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು