ಬೆಂಗಳೂರು: ದಿ ಬೆಂಗಳೂರು ಜೆಸ್ಯೂಟ್ ಎಜುಕೇಷನಲ್ ಸೊಸೈಟಿ ವತಿಯಿಂದ, ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಉದ್ಘಾಟನೆಯು ಸೆಪ್ಟೆಂಬರ್ 27ರ ಮಂಗಳವಾರ ಸಂಜೆ 4 ಗಂಟೆಗೆ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಉಚ್ಚತರ್ ಶಿಕ್ಷಣ ಅಭಿಯಾನದ ಅಡಿಯಲ್ಲಿ ನಡೆಯಲಿದೆ.
ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ವಿಶ್ವವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ ಮತ್ತು ಸಭಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಗೌರವಾನ್ವಿತ ಅತಿಥಿಗಳಾಗಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಸಿ.ಎನ್ ಮಾತನಾಲಿದ್ದಾರೆ.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಆರ್ಚ್ ಬಿಷಪ್ ರೆವರೆಂಡ್ ಡಾ. ಪೀಟರ್ ಮಚಾಡೋ , ಎಸ್.ಜೆ.ಯು ಮತ್ತು ಕರ್ನಾಟಕ ಪ್ರಾಂತೀಯ ಚಾನ್ಸಲರ್ ರೆವರೆಂಡ್ ಫಾದರ್ ಡಿಯೋನಿಸಿಯಸ್ ವಾಜ್, ಎಸ್.ಜೆ., ಸೈಂಟ್ ಜೋಸೆಫ್ ಯೂನಿವರ್ಸಿಟಿ ಪ್ರೊ-ಚಾನ್ಸಲರ್ ರೆವರೆಂಡ್ ಫಾ. ಸ್ವೆಬರ್ಟ್ ಡಿ’ಸಿಲ್ವ, ಎಸ್.ಜೆ. , ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಉಪಕುಲಪತಿ, ರೆವರೆಂಡ್ ಫಾದರ್ ಡಾ. ವಿಕ್ಟರ್ ಲೋಬೊ, ಎಸ್.ಜೆ. ಈ ಸಂದರ್ಭದಲ್ಲಿ ಭಾಗವಹಿಸಲಿದ್ದಾರೆ.