ಮಂಗಳೂರು: ಸಹಕಾರಿ ಕ್ಷೇತ್ರದ ಹುಟ್ಟು ಮತ್ತು ಉದ್ದೇಶಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸಹಕಾರಿ ಕ್ಷೇತ್ರದ ಆರಂಭದಿಂದಲೂ ಇಲ್ಲಿಯವರೆಗಿನ ಪಯಣ ಮತ್ತು ಸಾಧನೆ ಅಪೂರ್ವವಾದುದು ಎಂದು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಪ್ರಾಂಶುಪಾಲೆ ಡಾ.ಅನಸೂಯಾ ರೈ ಹೇಳಿದರು.
ನಗರದ ರವೀಂದ್ರ ಕಲಾಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳ ನಿಯಮಿತ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 69ನೇ ಅಖಿಲ ಭಾರತ ಸಹಕಾರಿ ಸಪ್ತಾಹ-2022ರ ಅಂಗವಾಗಿ ಬುಧವಾರ ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತದ ನಿರ್ದೇಶಕ ಡಾ.ಹರೀಶ್ ಆಚಾರ್ಯ ಮಾತನಾಡಿ, ಸಹಕಾರಿ ತತ್ವವು ಯಾವುದೇ ಧರ್ಮ, ಸಮುದಾಯ, ರಾಜಕೀಯ ನಿಲುವುಗಳು ಮತ್ತು ಲಿಂಗಭೇದಗಳನ್ನು ಮೀರಿದೆ. ಯುವಕರ ಪಾಲ್ಗೊಳ್ಳುವಿಕೆಯ ಮೂಲಕ, ಸಹಕಾರದ ತತ್ವವನ್ನು ಮುಂದಿನ ಪೀಳಿಗೆಗೆ ರವಾನಿಸುವ ಪ್ರಯತ್ನವನ್ನು ಮಾಡಲಾಗಿದೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತದ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಹಕಾರ ಇಲಾಖೆ ಅಧೀಕ್ಷಕ ಎನ್.ಜೆ.ಗೋಪಾಲ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ ನಿರ್ದೇಶಕರಾದ ವಿನಯ ಕುಮಾರ್ ಸೂರಿಂಜೆ, ಚಿತ್ತರಂಜನ್ ಬೋಳಾರ್, ಅನುಪಮಾ ಎ. ರಾವ್, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಸುರೇಶ್, ಡಾ.ಗಾಯತ್ರಿ ಎನ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್ ನಿರ್ದೇಶಕಿ ಸಾವಿತ್ರಿ ರೈ ಕೆ. ಅವರು ಸಭಿಕರನ್ನು ಸ್ವಾಗತಿಸಿದರು ಮತ್ತು ಕೃತಜ್ಞತಾ ಮತ ಚಲಾಯಿಸಿದರು. ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
1985 ರಲ್ಲಿ ಆರಂಭವಾದ ದುಬೈನ ಮೊಟ್ಟ ಮೊದಲ ಕನ್ನಡಿಗರ ಸಾಂಸ್ಕೃತಿಕ ಸಂಸ್ಥೆ ಎಂದು ಪ್ರಖ್ಯಾತಿ ಪಡೆದಿರುವ ಕರ್ನಾಟಕ ಸಂಘ ದುಬೈ…
ಪ್ರಿಯತಮನೊಂದಿಗೆ ಶೋಕಿಮಾಡಿಕೊಂಡು ಹೆಚ್ಚು ಕೈ ಸಾಲಗಳನ್ನು ಮಾಡಿಕೊಂಡಿದ್ದ ಯುವತಿ ಮನೆ ಮಾಲಕಿಯನ್ನೆ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದಿದ್ದು ಕೆಂಗೇರಿ ಠಾಣೆ…
ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ವಿಶ್ವಾದ್ಯಂತ ಸಾವಿರಾರು ಬಳಕೆದಾರರಿಗೆ ಏಕಾಏಕಿ ಸ್ಥಗಿತಗೊಂಡಿವೆ ಎಂದು ಸ್ಥಗಿತ…
ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಯುನಿವರ್ಸಿಟಿ ಸಮೀಪ ಬೆಳಗ್ಗೆ ಡಿಸೇಲ್ ಖಾಲಿಯಾಗಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹಿಡೆದ ಪರಿಣಾಮ ಓರ್ವ…
2023 ಹಾಗೂ 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶದಲ್ಲಿ ಕೊಡಗಿನ ಶುಂಠಿ ಕೊಪ್ಪ ನಿವಾಸಿ…
ಮಾನಸಿಕವಾಗಿ ನೊಂದ ಮಹಿಳೆಯೊರ್ವಳು ಮನೆಯ ಅಡಿಗೆ ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಂಗ್ರಪಾಡಿಯ ಸಾಯಿಬಾಬ…