News Karnataka Kannada
Saturday, April 27 2024
ಕ್ಯಾಂಪಸ್

ಆಹಾರ ಕಲಬೆರಕೆ ಪತ್ತೆ ಹಚ್ಚುವಿಕೆ: ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

Detection of Food Adulteration: Information and Training Workshop
Photo Credit : News Kannada

ಉಜಿರೆ, ಸೆ.4: ಆಹಾರ ವಸ್ತುಗಳ ಕಲಬೆರಕೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ‘ಆಹಾರ ವಸ್ತುಗಳಲ್ಲಿರುವ ಕಲಬೆರಕೆ ಪತ್ತೆ ಹಚ್ಚುವಿಕೆ: ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ’ವು ಆ.31ರಂದು ನಡೆಯಿತು.

ಅಂತಿಮ ಬಿ.ಎಸ್.ಸಿ. ವಿದ್ಯಾರ್ಥಿಗಳು ಕಾಲೇಜಿನ ಪ್ರಯೋಗಾಲಯದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿಬಿಎಸ್ಸಿ) ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಹಾರ ಪದಾರ್ಥಗಳಲ್ಲಿರುವ ಕಲಬೆರಕೆಯನ್ನು ಸುಲಭವಾಗಿ ಪತ್ತೆ ಮಾಡುವ ಪರೀಕ್ಷೆಗಳನ್ನು ಮಾಡಿ ತೋರಿಸಿ ಮಾಹಿತಿ ಮತ್ತು ತರಬೇತಿ ನೀಡಿದರು.

ಹಾಲು, ಸಕ್ಕರೆ, ಬೆಲ್ಲ, ಜೇನುತುಪ್ಪ, ಅರಿಶಿನ ಹುಡಿ, ಅಕ್ಕಿಹಿಟ್ಟು, ಬೆಣ್ಣೆ, ತುಪ್ಪ, ತೆಂಗಿನೆಣ್ಣೆ ಮುಂತಾದ ನಿತ್ಯ ಬಳಕೆಯ ಆಹಾರ ಪದಾರ್ಥಗಳಲ್ಲಿರುವ ಕಲಬೆರಕೆಯನ್ನು ಪತ್ತೆ ಮಾಡಿ ತೋರಿಸಲಾಯಿತು.

ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಾಕುಮಾರಿ ಕೆ.ಪಿ. ಅವರು ಮಕ್ಕಳಿಗೆ ಕಾರ್ಯಾಗಾರದ ಪ್ರಾಮುಖ್ಯ ತಿಳಿಸಿದರು. “ವ್ಯಾಪಾರಿಗಳು, ಮಧ್ಯವರ್ತಿಗಳು ಹೆಚ್ಚು ಹಣ ಗಳಿಸುವ ದುರುದ್ದೇಶದಿಂದ ಕಲಬೆರಕೆ ಮಾಡುತ್ತಾರೆ. ಇದರಿಂದಾಗಿ ಜನಸಾಮಾನ್ಯರು ವಿವಿಧ ರೋಗ ರುಜಿನಗಳಿಗೆ ತುತ್ತಾಗುವುದನ್ನು ತಪ್ಪಿಸಲು ಈ ರೀತಿಯ ತರಬೇತಿ ಕಾರ್ಯಕ್ರಮ ಸಹಕಾರಿ” ಎಂದರು.

ವಿಭಾಗದ ಉಪನ್ಯಾಸಕಿ ಸಂಗೀತ ಬಿ. ಕಾರ್ಯಕ್ರಮ ಸಂಯೋಜಿಸಿದರು. ಉಪನ್ಯಾಸಕಿಯರಾದ ದಿವ್ಯ ಹಾಗೂ ಗಾನವಿ ಡಿ. ಸಹಕಾರ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು