ಆಹಾರ ಕಲಬೆರಕೆ ಪತ್ತೆ ಹಚ್ಚುವಿಕೆ: ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

ಉಜಿರೆ, ಸೆ.4: ಆಹಾರ ವಸ್ತುಗಳ ಕಲಬೆರಕೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ‘ಆಹಾರ ವಸ್ತುಗಳಲ್ಲಿರುವ ಕಲಬೆರಕೆ ಪತ್ತೆ ಹಚ್ಚುವಿಕೆ: ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ’ವು ಆ.31ರಂದು ನಡೆಯಿತು.

ಅಂತಿಮ ಬಿ.ಎಸ್.ಸಿ. ವಿದ್ಯಾರ್ಥಿಗಳು ಕಾಲೇಜಿನ ಪ್ರಯೋಗಾಲಯದಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿಬಿಎಸ್ಸಿ) ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಆಹಾರ ಪದಾರ್ಥಗಳಲ್ಲಿರುವ ಕಲಬೆರಕೆಯನ್ನು ಸುಲಭವಾಗಿ ಪತ್ತೆ ಮಾಡುವ ಪರೀಕ್ಷೆಗಳನ್ನು ಮಾಡಿ ತೋರಿಸಿ ಮಾಹಿತಿ ಮತ್ತು ತರಬೇತಿ ನೀಡಿದರು.

ಹಾಲು, ಸಕ್ಕರೆ, ಬೆಲ್ಲ, ಜೇನುತುಪ್ಪ, ಅರಿಶಿನ ಹುಡಿ, ಅಕ್ಕಿಹಿಟ್ಟು, ಬೆಣ್ಣೆ, ತುಪ್ಪ, ತೆಂಗಿನೆಣ್ಣೆ ಮುಂತಾದ ನಿತ್ಯ ಬಳಕೆಯ ಆಹಾರ ಪದಾರ್ಥಗಳಲ್ಲಿರುವ ಕಲಬೆರಕೆಯನ್ನು ಪತ್ತೆ ಮಾಡಿ ತೋರಿಸಲಾಯಿತು.

ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಾಕುಮಾರಿ ಕೆ.ಪಿ. ಅವರು ಮಕ್ಕಳಿಗೆ ಕಾರ್ಯಾಗಾರದ ಪ್ರಾಮುಖ್ಯ ತಿಳಿಸಿದರು. “ವ್ಯಾಪಾರಿಗಳು, ಮಧ್ಯವರ್ತಿಗಳು ಹೆಚ್ಚು ಹಣ ಗಳಿಸುವ ದುರುದ್ದೇಶದಿಂದ ಕಲಬೆರಕೆ ಮಾಡುತ್ತಾರೆ. ಇದರಿಂದಾಗಿ ಜನಸಾಮಾನ್ಯರು ವಿವಿಧ ರೋಗ ರುಜಿನಗಳಿಗೆ ತುತ್ತಾಗುವುದನ್ನು ತಪ್ಪಿಸಲು ಈ ರೀತಿಯ ತರಬೇತಿ ಕಾರ್ಯಕ್ರಮ ಸಹಕಾರಿ” ಎಂದರು.

ವಿಭಾಗದ ಉಪನ್ಯಾಸಕಿ ಸಂಗೀತ ಬಿ. ಕಾರ್ಯಕ್ರಮ ಸಂಯೋಜಿಸಿದರು. ಉಪನ್ಯಾಸಕಿಯರಾದ ದಿವ್ಯ ಹಾಗೂ ಗಾನವಿ ಡಿ. ಸಹಕಾರ ನೀಡಿದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

5 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago