ಉಜಿರೆ ಎಸ್‌ ಡಿ ಎಂ ಕಾಲೇಜು ಪ್ರಾಂಶುಪಾಲರಾಗಿ ಡಾ.ಎ.ಜಯಕುಮಾರ ಶೆಟ್ಟಿ ನೇಮಕ

ಉಜಿರೆ: ಶ್ರೀ ಧ.ಮ. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಉಪಪ್ರಾಂಶುಪಾಲ ಡಾ.ಎ.ಜಯಕುಮಾರ ಶೆಟ್ಟಿ ಅವರು ನೇಮಕಗೊಂಡಿದ್ದಾರೆ.

ಡಾ.ಉದಯಚಂದ್ರ ಅವರ ಸೇವಾ ನಿವೃತ್ತಿಯಿಂದಾಗಿ ತೆರವಾದ ಪ್ರಾಂಶುಪಾಲರ ಹುದ್ದೆಗೆ ಡಾ.ಎ.ಜಯಕುಮಾರ ಶೆಟ್ಟಿ ನೇಮಕವಾಗಿದ್ದಾರೆ. ಕಳೆದ ೩೮ ವರ್ಷಗಳಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ವಿಭಾಗದ ಮುಖ್ಯಸ್ಥರಾಗಿ, ಕಲಾ ನಿಕಾಯದ ಡೀನ್‌ ಆಗಿ ಹಾಗೂ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದು, ಈಗ ಪ್ರಾಚಾರ್ಯರಾಗಿ ಪದೋನ್ನತಿ ಹೊಂದಿದ್ದಾರೆ.

ಮಂಗಳೂರು ತಾಲೂಕಿನ ಅರ್ಕುಳ ಬೀಡು ಮನೆತನದವರಾದ ಡಾ.ಎ.ಜಯಕುಮಾರಶೆಟ್ಟಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಅರ್ಕುಳ ಶ್ರೀರಾಮ ಶಾಲೆ, ಪದವಿ ಶಿಕ್ಷಣವನ್ನು ಮಂಗಳೂರು ವಿವಿ ಕಾಲೇಜಿನಲ್ಲಿ ಹಾಗೂ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ರ್ಯಾಂಕ್‌ ಮನ್ನಣೆಯೊಂದಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ಮಂಗಳೂರಿನ ಶ್ರೀ ಧ.ಮಂ ಆಡಳಿತ ಮಹಾವಿದ್ಯಾಲಯದಲ್ಲಿ ೧೯೮೫ರಲ್ಲಿ ಅಧ್ಯಾಪಕರಾಗಿ ಸೇವೆಗೆ ಸೇರಿ ನಂತರ ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ
ಪ್ರಾಧ್ಯಾಪಕರಾದರು.

ಕೈಗಾರಿಕಾ ಪ್ರೋತ್ಸಾಹಕಗಳ ಮೇಲಿನ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ, ಸಿಬ್ಬಂದಿ ನಿರ್ವಹಣೆಯಲ್ಲಿ ಭಾರತೀಯ ವಿದ್ಯಾಭವನದಿಂದ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಎಂ.ಬಿ.ಎ ಪದವಿ ಪಡೆದಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ಹಾಗೂ ತುಮಕೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಅಧಿಕೃತ ಸಂಶೋಧನಾ ಮಾರ್ಗದರ್ಶಕರಾಗಿರುವ ಇವರ ಮಾರ್ಗದರ್ಶನದಲ್ಲಿ ೮ ಸಂಶೋಧನಾರ್ಥಿಗಳು ಪಿ.ಎಚ್.ಡಿ. ಪದವಿ ಪಡೆದಿದ್ದು, ಪ್ರಸ್ತುತ ನಾಲ್ಕು ವಿದ್ಯಾರ್ಥಿಗಳು ಸಂಶೋಧನಾನಿರತರಾಗಿದ್ದಾರೆ.

ಯು.ಜಿ.ಸಿ ಪ್ರಾಯೋಜಿತ ಮೂರು ಸಂಶೋಧನಾ ಪ್ರಾಜೆಕ್ಟ್‌ಗಳನ್ನು ಪೂರೈಸಿರುವ ಇವರ ೫೦ಕ್ಕೂ ಅಧಿಕ ಸಂಶೋಧನಾ ಲೇಖನಗಳು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಕಮ್ಮಟಗಳಲ್ಲಿ ೫೦ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಆರ್ಥಿಕ ಅಭಿವೃದ್ಧಿ, ಹಕ್ಕುಗಳ ಪರಿಭಾಷೆಯಲ್ಲಿ ಅಭಿವೃದ್ಧಿ, ಒಳಗೊಳ್ಳುವ ಅಭಿವೃದ್ಧಿ, ಅಂತರರಾಷ್ಟ್ರೀಯ ವ್ಯಾಪಾರ ಹಾಗೂ ಸಿರಿ ಮತ್ತಿತರ ೧೦ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣಾಭಿವೃದ್ಧಿ ಅಧ್ಯಯನ ಮಂಡಳಿಯ ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿ ಅತ್ಯುತ್ತಮ ಯೋಜನಾಧಿಕಾರಿಯಾಗಿ ರಾಜ್ಯಪ್ರಶಸ್ತಿಯನ್ನು ಪಡೆದಿದ್ದಾರೆ. ರೋಟರಿ ಕ್ಲಬ್‌ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವೆಗಾಗಿ ಜಿಲ್ಲಾ ಅತ್ಯುತ್ತಮ ಅಧ್ಯಕ್ಷರಾಗಿ ಗೌರವಿಸಲ್ಪಟ್ಟಿದ್ದಾರೆ. ಸಮಕಾಲೀನ ಆರ್ಥಿಕ ವಿಷಯಗಳ ಬಗ್ಗೆ ಪತ್ರಿಕೆಗಳಲ್ಲಿ ಇವರ ಅಂಕಣಗಳು ಪ್ರಕಟವಾಗುತ್ತಿವೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

31 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

49 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago