News Karnataka Kannada
Thursday, May 09 2024
ಮಂಗಳೂರು

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅನುಮೋದನೆ

Govt approves setting up of PU Science Department at Gerukatte Manshar Campus
Photo Credit : By Author

ಬೆಳ್ತಂಗಡಿ: ವಿದ್ಯಾಪ್ರೇಮಿ ಸಯ್ಯಿದ್ ಉಮ್ಮರ್ ಅಸ್ಸಖಾಫ್ ಮನ್‌ಶರ್ ತಂಙಳ್ ಅವರ ನೇತೃತ್ವದಲ್ಲಿ ಗೇರುಕಟ್ಟೆಯಲ್ಲಿ ಕಳೆದ ೧೩ ವರ್ಷಗಳಿಂದ ಆರಂಭಗೊಂಡು ಮುಂದುವರಿಯುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಹೊಸ ಸೇರ್ಪಡೆ ಎಂಬಂತೆ ಪ.ಪೂ ವಿಜ್ಞಾನ (ಸೈನ್ಸ್) ವಿಭಾಗ ಆರಂಭಿಸಲು ಸರಕಾರ ಅಧಿಕೃತ ಅನುಮೋದನೆ ನೀಡಿದೆ.

ಈಗಾಗಲೇ ಮನ್‌ಶರ್ ಅಕಾಡೆಮಿಗೆ ೨೦೨೨-೨೩ರ ಶೈಕ್ಷಣಿಕ ಸಾಲಿನಲ್ಲಿ ಪ.ಪೂ ವಿಭಾಗ ತೆರೆದು ವಾಣಿಜ್ಯ ಮತ್ತು ಕಲಾ ವಿಭಾಗ ಪ್ರಾರಂಭಿಸಲು ಅನುಮೋದನೆ ದೊರತಿತ್ತು. ಇದೀಗ ಹೆಚ್ಚುವರಿಯಾಗಿ ೨೦೨೩-೨೪ ರ ಶೈಕ್ಷಣಿಕ ಸಾಲಿಗೆ ವಿಜ್ಞಾನ (ಸೈನ್ಸ್) ವಿಭಾಗಕ್ಕೂ ಅನುಮೋದನೆ ಲಭಿಸದೆ. ಆ ನಿಟ್ಟಿನಲ್ಲಿ ದಾಖಲಾತಿ ಆರಂಭವಾಗಿದೆ.

ಸಂಸ್ಥೆಯಲ್ಲಿ ಈಗಾಗಲೇ ಸುಸಜ್ಜಿತ ಲ್ಯಾಬ್‌ನೊಂದಿಗೆ ಆಧುನಿಕ ಶೈಲಿಯ ಸ್ಮಾರ್ಟ್ ಕ್ಲಾಸ್ ಒಳಗೊಂಡು ಅನುಭವಿ ಹಾಗೂ ನುರಿತ ಅಧ್ಯಾಪಕ ವೃಂದ ತರಗತಿ ನಡೆಸುತ್ತಿದ್ದಾರೆ. ನೀಟ್ ಮತ್ತು ಸಿಇಟಿ ಯಂತಹಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರಿಸುವ ಗುರಿ ಕೂಡ ಹೊಂದಲಾಗಿದೆ.

ಗ್ರಾಮೀಣ‌ ಭಾಗದ ಆಸಕ್ತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು‌ ಎಂದು ಚೇರ್‌ಮ್ಯಾನ್ ಮತ್ತು ಮ್ಯಾನೇಜ್‌ಮೆಂಟ್ ಕೋರಿದೆ.

ಪ್ರಸ್ತುತ ಮನ್‌ಶರ್ ಪ್ರಿಸ್ಕೂಲ್, ಪ್ರೈಮರಿ ಸ್ಜೂಲ್, ಹೈಸ್ಕೂಲ್, ಪಿ.ಯು. ಕಾಲೇಜು, ಬೆಳ್ತಂಗಡಿ ತಾಲೂಕಿನ ಏಕೈಕ ಪ್ಯಾರಾಮೆಡಿಕಲ್ ಕಾಲೇಜು , ಮನ್‌ಶರ್ ಅರೇಬಿಕ್ ಕಾಲೇಜು ಹಾಗು ಸ್ಕೂಲ್ ಆಫ್ ಹಿಫುಲುಲ್ ಖುರ್‌ಆನ್‌ ವಿಭಾಗಗಳನ್ನು ನಡೆಸಲಾಗುತ್ತಿದ್ದು, ಸರಿ ಸುಮಾರು ೭೦೦ ರಿಂದ ೭೫೦ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು