News Karnataka Kannada
Monday, April 29 2024
ಕ್ಯಾಂಪಸ್

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಕಾರ್ಯಾಗಾರ

Higher Education Workshop at Mangalore University
Photo Credit : By Author

ಮಂಗಳೂರು: ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಬೇಡಿಕೆ ಹೆಚ್ಚುತ್ತಿದೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿಂದುಳಿದಿದೆ. ಗುಣಮಟ್ಟ ಆಕಸ್ಮಿಕವಲ್ಲ. ಗುಣಮಟ್ಟ ವ್ಯವಸ್ಥಿತ ಪ್ರಯತ್ನ ಮತ್ತು ಸೃಜನಶೀಲ ಕಲಿಕೆಯ ಮೂಲಕ ಖಚಿತಪಡಿಸಿಕೊಳ್ಳಬೇಕು  ಎಂದು ತಮಿಳುನಾಡಿನ ಗಾಂಧಿಗ್ರಾಮ್ ರೂರಲ್ ಇನ್ಸ್ಟಿಟ್ಯೂಟ್ ಡೀಮ್ಡ್ ಯೂನಿವರ್ಸಿಟಿ ವಿಶ್ರಾಂತ ಕುಲಪತಿ ಪ್ರೊ. ಎಂ ಜಿ ಸೇತುರಾಮನ್ ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಐಕ್ಯೂಎಸಿ ಉನ್ನತ ಶಿಕ್ಷಣ ಸಂಸ್ಥೆಗಳ ಮೌಲ್ಯಮಾಪನ ಮತ್ತು ಶ್ರೇಯಾಂಕ ಅಸೋಸಿಯೇಷನ್ ಆಫ್ ಬ್ರಿಟಿಷ್ ಸ್ಕಾಲರ್ಸ್ ಸಹಯೋಗದೊಂದಿಗೆ  ವಿಶ್ವವಿದ್ಯಾಲಯ  ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಸಭಿಕರನ್ನುದ್ದೇಶಿಸಿ ಶನಿವಾರ ಮಾತನಾಡಿದರು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಾಡಿತ್ತಾಯ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ 2020ರ ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗೆ ಅವಕಾಶವನ್ನು ಒದಗಿಸಿದೆ. ತಂಡದ ಪ್ರಯತ್ನದ ಮೂಲಕ ಚಟುವಟಿಕೆಗಳು ಮತ್ತು ಅವುಗಳನ್ನು ವ್ಯವಸ್ಥಿತವಾಗಿ ದಾಖಲಿಸುವುದು ಶೈಕ್ಷಣಿಕ ಸಂಘಟನೆ ಅಗತ್ಯ ಎಂದರು.

ಬ್ರಿಟಿಷ್ ಸ್ಕಾಲರ್ಸ್ ಸಂಘದ ಕಾರ್ಯದರ್ಶಿ ಪ್ರೊ.ಕೆ.ಆರ್.ಚಂದ್ರಶೇಖರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಮಂಗಳೂರು ವಿವಿ ಹಣಕಾಸು ಅಧಿಕಾರಿ ಪ್ರೊ ವೈ ಸಂಗಪ್ಪ, ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ನಿರ್ದೇಶಕ, ಕಾರ್ಯಕ್ರಮ ಸಂಯೋಜಕ ಪ್ರೊ.ಮಂಜುನಾಥ ಪಟ್ಟಾಭಿ ಅತಿಥಿಗಳನ್ನು ಸ್ವಾಗತಿಸಿದರು.

ಐಕ್ಯೂಎಸಿ ಸಹ ನಿರ್ದೇಶಕಿ ಪ್ರೊ.ಮೋನಿಕಾ ಸದಾನಂದ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರೊ.ವಿಶಾಲಾಕ್ಷಿ. ಬಿ ಧನ್ಯವಾದ ಸಲ್ಲಿಸಿದರು, ಡಾ.
ಪ್ರೀತಿ ಕೀರ್ತಿ ಡಿಸೋಜಾ ಕಾರ್ಯಕ್ರಮ ನಿರ್ವಹಿಸಿದರು.

ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರು ವಿಶ್ವವಿದ್ಯಾಲಯ ಮತ್ತು ಐಕ್ಯೂಎಸಿ ಪ್ರತಿನಿಧಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು