ಕ್ಯಾಂಪಸ್

ಏಪ್ರಿಲ್ 26 ರಿಂದ ‘ಇನ್ಕ್ರಿಡಿಯಾ-2023’ ಅಂತರ್ ಕಾಲೇಜು ಟೆಕ್ನೋ-ಕಲ್ಚರಲ್ ಫೆಸ್ಟ್

ನಿಟ್ಟೆ: ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತನ್ನ ಕಾಲೇಜು ದಿನದ ಅಂಗವಾಗಿ ಏಪ್ರಿಲ್ 26 ರಿಂದ 29 ರವರೆಗೆ ರಾಷ್ಟ್ರಮಟ್ಟದ ನಾಲ್ಕು ದಿನಗಳ ಅಂತರ ಕಾಲೇಜು ಟೆಕ್ನೋ-ಕಲ್ಚರಲ್ ಫೆಸ್ಟ್ ‘ಇಂಕ್ರಿಡಿಯಾ 23’ ಅನ್ನು ಕ್ಯಾಂಪಸ್ನಲ್ಲಿ ಆಯೋಜಿಸಲಿದೆ.

ನಿಟ್ಟೆಯ ಎನ್ಎಂಎಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಾಷ್ಟ್ರಮಟ್ಟದ ಟೆಕ್ನೋ-ಕಲ್ಚರಲ್ ಫೆಸ್ಟ್ ‘ಇನ್ಕ್ರಿಡಿಯಾ’. ಇದು ನಮ್ಮ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಮತ್ತು ಸಾಂಸ್ಕೃತಿಕ ಪ್ರತಿಭೆ ಪೋಷಿಸುವ ಗುರಿಹೊಂದಿದೆ.  ಇದು ತಾಂತ್ರಿಕದರ್ಶನ ಮತ್ತು ಆನಂದೋತ್ಸವ ಎಂಬ ಎರಡು ವಿಭಿನ್ನ ಆಚರಣೆಗಳ ಕಾರ್ಯಕ್ರಮವನ್ನು ಹೊಂದಿದೆ. ಈಗ, ಕಳೆದ ಐದು ವರ್ಷಗಳಿಂದ ನವೀನ ಉತ್ಸವ ಮಾದರಿಯೊಂದಿಗೆ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಈ  ಉತ್ಸವಗಳು ದೇಶಾದ್ಯಂತದ ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿವೆ. ಈ ವರ್ಷ ಸಂಸ್ಥೆಯು ಕ್ಯಾಂಪಸ್ನಲ್ಲಿ 25000 ಭಾಗವಹಿಸುವ ನಿರೀಕ್ಷೆ ಇದೆ. 60 ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ಈ ಉತ್ಸವವು ಸಂಸ್ಥೆಯ ವಾರ್ಷಿಕ ಕಾರ್ಯಕ್ರಮವಾಗಿದ್ದು,  ಕಂಪ್ಯೂಟರ್ ಕೋಡ್ಗಳನ್ನು ಟೈಪ್ ಮಾಡುವುದು, ಸರ್ಕ್ಯೂಟ್‌  ಸಂಬಂಧಿ ಕಾರ್ಯಕ್ರಮ,  ಇತರ ಎಲ್ಲಾ ವಿಭಾಗಗಳ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸಲು ಸೂಕ್ತ ಅವಕಾಶ ಒದಗಿಸುತ್ತದೆ . ವಸ್ತುಪ್ರದರ್ಶನಗಳು, ಆಹಾರ ಮಳಿಗೆಗಳು, ಪ್ರೊ-ನೈಟ್ಸ್, ಆಟಗಳು ಇತ್ಯಾದಿಗಳು ಈ ಉತ್ಸವದಲ್ಲಿ ನೋಡಬೇಕಾದ ಇತರ ಆಕರ್ಷಣೆಗಳಾಗಿವೆ.

ಎ.26ರಂದು ಬೆಳಗ್ಗೆ 9.30ಕ್ಕೆ ನಿಟ್ಟೆ ಕ್ಯಾಂಪಸ್ ನ ಸದಾನಂದ ಓಪನ್ ಏರ್ ಆಡಿಟೋರಿಯಂನಲ್ಲಿ ಕಾಲೇಜು ದಿನಾಚರಣೆ ಕಾರ್ಯಕ್ರಮವನ್ನು ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ.ಎ.ವಿ.ರಮಣ ಉದ್ಘಾಟಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ  ಎನ್.ವಿನಯ ಹೆಗ್ಡೆ ವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳು ಇನ್ ಕ್ರಿಡಿಯಾ ಇನ್ಸ್ಟಾಗ್ರಾಮ್ ಪುಟ ಅಥವಾ ವೆಬ್ಸೈಟ್ http://www.incridea.in/ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಲುಂಕರ್ ತಿಳಿಸಿದ್ದಾರೆ.

Sneha Gowda

Recent Posts

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

8 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

22 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

24 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

36 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

38 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

43 mins ago