News Karnataka Kannada
Sunday, May 19 2024
ಕ್ಯಾಂಪಸ್

ಸ್ವಚ್ಛತೆ ಮತ್ತು ಸ್ವಾವಲಂಬನೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಿ  – ಸೀತಾರಾಮ್ ಭಟ್ 

Inculcate cleanliness and self-reliance in students: Sitaram Bhat 
Photo Credit : News Kannada
ಕಾಂತಾವರ : ಜೂನ್ 17 ರಂದು  ಪ್ರಕೃತಿ ವಿದ್ಯಾ ಸಂಸ್ಥೆಯವರು ಶಿಕ್ಷಕರು ಮತ್ತು ಪೋಷಕರು  ಪೂರ್ವಾಭಿಮುಖಗೊಳ್ಳುವ  ಕಾರ್ಯಕ್ರಮವನ್ನು  ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ  ನಿವೃತ್ತ ಪ್ರಾಧ್ಯಾಪಕರಾದಂತಹ ಶ್ರೀಯುತ ಸೀತಾರಾಮ್ ಭಟ್ ರವರು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿಯು ಮುಖ್ಯ ಎಂದು ಹೇಳುತ್ತಾ , “ವಿದ್ಯಾರ್ಥಿಗಳು ಬಾಲ್ಯದಿಂದಲೇ ಸ್ವಚ್ಛತೆ ಮತ್ತು ಸ್ವಾವಲಂಬನೆ ಬೆಳಿಸಿಕೊಳ್ಳುವುದು ಅವಶ್ಯ”ವೆಂದು ಹೇಳುವುದರ ಜೊತೆಗೆ ಆರೋಗ್ಯದ ಹಿತ ದೃಷ್ಟಿಯಿಂದ ಒಳ್ಳೆಯ  ಆಹಾರ ಸೇವನೆ ಅಗತ್ಯವಾದದ್ದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ  ವೇದಿಕೆಯಲ್ಲಿದ್ದ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಯುತ ಚಾರ್ಲ್ಸ್ ಕ್ರಾಸ್ತರವರು ವಿದ್ಯಾರ್ಥಿಗಳಲ್ಲಿ ಶಿಸ್ತುನ್ನು ಬೆಳೆಸುವುದು ಮುಖ್ಯ ವೆಂದು ತಿಳಿಸಿದರು .
ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾರ್ಕಳ ಟೌನ್ ಪೊಲೀಸ್ ಸ್ಟೇಶನ್ ಅಧಿಕಾರಿ ಸಂತೋಷ್ ಕುಮಾರ್ ಅವರು ಮಕ್ಕಳು  ಮೊಬೈಲ್ ಬಳಸುವಾಗ ಜಾಗರೂಕರಾಗಿರಿ ಎಂದು ಪೋಷಕರಿಗೆ ಮನವರಿಕೆ ಮಾಡಿಸಿದರು.  ಪ್ರೌಢಶಾಲೆಯ  ಪ್ರಾಂಶುಪಾಲರಾದ ಶ್ರೀಪ್ರಸಾದರವರು ಶೈಕ್ಷಣಿಕ ವರ್ಷದ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿದರು.
ಪದವಿ ಪೂರ್ವ ಕಾಲೇಜಿನ  ಪ್ರಾಂಶುಪಾಲರಾದ ಪ್ರೊಫೆಸರ್ ನಾಗರಾಜ್ ರಾವ್ ರವರು ಸಂಸ್ಥೆಯ ಕಾರ್ಯ ಕಲಾಪಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡಿದರಲ್ಲದೇ ಈ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು.   ಇದೇ ಸಂದರ್ಭದಲ್ಲಿ ನೂತನ  ‘ಶಿಕ್ಷಕ ರಕ್ಷಕ ಸಂಘ’ದ ಉದ್ಘಾಟನೆಯನ್ನು ನೆರವೇರಿಸಲಾಯಿತು.
ಪ್ರೌಢ ಶಾಲೆಯ ಇಂಗ್ಲಿಷ್ ಶಿಕ್ಷಕರಾದ  ಫ್ರಾನ್ಸಿಸ್ ವಾಜ್ , ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಸೌಮ್ಯ  ರವರು ನಿರೂಪಣೆಯನ್ನು ಮತ್ತು ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ಶೈಲಜಾ ರವರು  ಸ್ವಾಗತ ಭಾಷಣವನ್ನು ಹಾಗೂ ಪದವಿ ಪೂರ್ವ ಕಾಲೇಜಿನ ಹಿಂದಿ  ಉಪನ್ಯಾಸಿಕಿಯಾದ  ವಿಜಯಲಕ್ಷ್ಮೀ ಯವರು  ಎಲ್ಲರಿಗೂ ಧನ್ಯವಾದವನ್ನು  ಸಮರ್ಪಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು