ಕಾಂತಾವರ : ಆಗಸ್ಟ್15 ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ಎಪ್ಪತ್ತೈದನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಲ್ ಹರೀಶ್ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ಅನಂತರ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಮಹತ್ವ , ಸೈನಿಕರಾದ ನಾವು ಯಾವುದೇ ಪರಿಸ್ಥಿತಿಯಲ್ಲಿಯೂ ಎದೆಗುಂದದೆ ಧೈರ್ಯದಿಂದ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತೇವೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಸಮಯ ಎನ್ನುವಂತಹದ್ದು ತುಂಬಾ ಮಹತ್ವವಾದದ್ದು ಅದನ್ನು ವ್ಯರ್ಥ ಮಾಡದೆ ಸದುಪಯೋಗ ಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು ಮತ್ತು ಅಂದಿನ ಹಾಗೂ ಇಂದಿನ ಸಮಸ್ಯೆಗಳು, ನಾಗರಿಕ ಹೊಣೆಗಾರಿಕೆ, ವಿದ್ಯಾರ್ಥಿಗಳ ಕರ್ತವ್ಯವನ್ನು ಕುರಿತು ಭಾಷಣ ಮಾಡಿದರು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ್ ಕುಮಾರ್ ರವರು ಅತಿಥಿಗಳಿಗೆ ಸ್ಮರಣಿಕೆ ನೀಡುವುದರ ಮೂಲಕ ವಂದಿಸಿದರು. ಪ್ರಕೃತಿ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಕುಮಾರಿ ವಿನ್ಯಾರವರು ಕಾರ್ಯಕ್ರಮ ವನ್ನು ನಿರೂಪಿಸಿ ಎಲ್ಲರಿಗೂ ವಂದಿಸಿದರು.
ಈ ಸಂದರ್ಭದಲ್ಲಿ ಪ್ರಕೃತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಕುಮಾರಿ ಮಮತ ಶರ್ಮ, ಪ್ರಕೃತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮನಾಭ ಗೌಡ ಮತ್ತು ಪ್ರಕೃತಿ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಪ್ರಸಾದ್, ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು .