ಕಾಂತಾವರ: ನವೆಂಬರ್ ೧ ರಂದು ಪ್ರಕೃತಿ ಸಮೂಹ ಸಂಸ್ಥೆಯಲ್ಲಿ ಅರವತ್ತೇಳನೇಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು.
ಪ್ರಕೃತಿ ವಿದ್ಯಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ ಕುಮಾರವರು ಕನ್ನಡ ರಾಜ್ಯೋತ್ಸವದ ಶುಭ ಹಾರೈಸುವುದರೊಂದಿಗೆ ಕನ್ನಡ ಮಾತಾನಾಡುವುದೇ ನಮ್ಮೆಲ್ಲರ ಹೆಮ್ಮೆ ಹಾಗೂ ಕನ್ನಡ ಭಾಷೆಯನ್ನು ಪ್ರೀತಿಸೋಣ , ಗೌರವಿಸೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಕೃತಿ ಸಂಸ್ಥೆಯ ಆಡಿಳಿತಾಧಿಕಾರಿ ಕುಮಾರಿ ಮಮತ ಶರ್ಮ ರವರು, ಪ್ರಕೃತಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆಯಾದ ಕುಮಾರಿ ವಿನ್ಯಾ ರವರು ಉಪಸ್ಥಿತರಿದ್ದು, ಪ್ರಕೃತಿ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಪ್ರಸಾದ ರವರು ಈ ದಿನದ ವಿಶೇಷ ತೆಯನ್ನು ಕುರಿತು ಮಾತನಾಡಿದರು.
ಈ ಶುಭ ಸಂದರ್ಭದಲ್ಲಿ ಸಂಸ್ಥೆಗೆ ಕನ್ನಡ ಶಿಕ್ಷಕ ವೃಂದಾದವರು ನೆನಪಿನ ದ್ಯೋತಕವಾಗಿ ಕನ್ನಡಾಂಬೆಯ ಭಾವ ಚಿತ್ರವನ್ನು ನೀಡಿ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು.ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಅನುಶ್ರೀ ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ಭಾಷಣ ಮಾಡಿದಳು.ಅದೇ ರೀತಿಯಾಗಿ ಪ್ರಕೃತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಹಾಡು ಮತ್ತು ನೃತ್ಯ, ನಾಟಕವನ್ನು ಪ್ರದರ್ಶಿಸಿ ಎಲ್ಲರನ್ನು ಮನೋರಂಜಿಸಿದರು.
ಹತ್ತನೆಯ ತರಗತಿಯ ವಿದ್ಯಾರ್ಥಿಯಾದ ದೀಕ್ಷಿತ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಲವಿಟಾ ಸ್ವಾಗತಿಸಿ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ ಪ್ರಸಿದ್ಧ ಎಲ್ಲಾರಿಗೂ ವಂದಿಸಿದರು.