News Karnataka Kannada
Saturday, May 11 2024
ಕ್ಯಾಂಪಸ್

ಕಾಂತಾವರ: ಕನ್ನಡ ಮಾತಾಡುವುದೇ ಹೆಮ್ಮೆ- ಅಶೋಕ್ ಕುಮಾರ್

Kanthavara: Proud to speak Kannada: Ashok Kumar
Photo Credit : News Kannada

ಕಾಂತಾವರ: ನವೆಂಬರ್ ೧ ರಂದು ಪ್ರಕೃತಿ ಸಮೂಹ ಸಂಸ್ಥೆಯಲ್ಲಿ ಅರವತ್ತೇಳನೇಯ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು.

ಪ್ರಕೃತಿ ವಿದ್ಯಾ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಶೋಕ ಕುಮಾರವರು ಕನ್ನಡ ರಾಜ್ಯೋತ್ಸವದ ಶುಭ ಹಾರೈಸುವುದರೊಂದಿಗೆ ಕನ್ನಡ ಮಾತಾನಾಡುವುದೇ ನಮ್ಮೆಲ್ಲರ ಹೆಮ್ಮೆ ಹಾಗೂ ಕನ್ನಡ ಭಾಷೆಯನ್ನು ಪ್ರೀತಿಸೋಣ , ಗೌರವಿಸೋಣ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಕೃತಿ ಸಂಸ್ಥೆಯ ಆಡಿಳಿತಾಧಿಕಾರಿ ಕುಮಾರಿ ಮಮತ ಶರ್ಮ ರವರು, ಪ್ರಕೃತಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆಯಾದ ಕುಮಾರಿ ವಿನ್ಯಾ ರವರು ಉಪಸ್ಥಿತರಿದ್ದು, ಪ್ರಕೃತಿ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಶ್ರೀಪ್ರಸಾದ ರವರು ಈ ದಿನದ ವಿಶೇಷ ತೆಯನ್ನು ಕುರಿತು ಮಾತನಾಡಿದರು.

ಈ ಶುಭ ಸಂದರ್ಭದಲ್ಲಿ ಸಂಸ್ಥೆಗೆ ಕನ್ನಡ ಶಿಕ್ಷಕ ವೃಂದಾದವರು ನೆನಪಿನ ದ್ಯೋತಕವಾಗಿ ಕನ್ನಡಾಂಬೆಯ ಭಾವ ಚಿತ್ರವನ್ನು ನೀಡಿ ಕಾರ್ಯಕ್ರಮಕ್ಕೆ ಮೆರಗನ್ನು ನೀಡಿದರು.ಎಂಟನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಅನುಶ್ರೀ ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ಭಾಷಣ ಮಾಡಿದಳು.ಅದೇ ರೀತಿಯಾಗಿ ಪ್ರಕೃತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಹಾಡು ಮತ್ತು ನೃತ್ಯ, ನಾಟಕವನ್ನು ಪ್ರದರ್ಶಿಸಿ ಎಲ್ಲರನ್ನು ಮನೋರಂಜಿಸಿದರು.

ಹತ್ತನೆಯ ತರಗತಿಯ ವಿದ್ಯಾರ್ಥಿಯಾದ ದೀಕ್ಷಿತ್ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಲವಿಟಾ ಸ್ವಾಗತಿಸಿ, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಕುಮಾರ ಪ್ರಸಿದ್ಧ ಎಲ್ಲಾರಿಗೂ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು