News Karnataka Kannada
Saturday, April 27 2024
ಮಂಗಳೂರು

ಮಿಲಾಗ್ರಿಸ್ ಕಾಲೇಜ್‌ ನಲ್ಲಿ ‘ಕೊಂಕಣಿ ಜಾನಪದ ಮತ್ತು ಭವಿಷ್ಯ’ ವಿಷಯದ ಕುರಿತು ವಿಚಾರ ಸಂಕಿರಣ

Dharma
Photo Credit : NewsKarnataka

ಮಂಗಳೂರು: ಇಂದು (ಮಾರ್ಚ್ 26) ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠ ಮತ್ತು ಮಿಲಾಗ್ರಿಸ್ ಕಾಲೇಜು ಮಂಗಳೂರು ವತಿಯಿಂದ ‘ಕೊಂಕಣಿ ಜಾನಪದ ಮತ್ತು ಭವಿಷ್ಯ’ ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ವನ್ನು ಮಿಲಾಗ್ರಿಸ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

New Project (1)

ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ.ಪಿ.ಎಲ್.ಧರ್ಮ ಅವರು ಕಾರ್ಯಕ್ರಮದ ಉದ್ಘಾಟಕರಾಗಿ ಮತ್ತು ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ತಮ್ಮ ಭಾಷಣ ದಲ್ಲಿ ” “ಮೌಖಿಕ ಪರಂಪರೆಯ ವಾಹಕ ಜನಪದ ಸಂಸ್ಕೃತಿ “: ಕೊಂಕಣಿ ಭಾಷೆ ಬಾಂದವ್ಯ ಬೆಸೆಯುವ ಕಲೆಯನ್ನು ಹೊಂದಿರುವ ಭಾಷೆಯಾಗಿದ್ದು, ಕೊಂಕಣಿ ಅಕಾಡೆಮಿಯು ಸಮಸ್ತ ಕೊಂಕಣಿ ಭಾಂದವರಿಗೆ ಕೊಂಕಣಿ ಭಾಷಾಭಿವೃದ್ದಿಗಾಗಿ ಅವಕಾಶಗಳನ್ನು ಕಲ್ಪಿಸುತ್ತಿದೆ ಹಾಗೂ ಕೊಂಕಣಿ ನಮ್ಮ ಮೂಲಭಾಷೆ, ಕೊಂಕಣಿ ಭಾಷಿಕರು ಮನೆಯಲ್ಲಿರುವ ಮಕ್ಕಳಿಗೆ ಕೊಂಕಣಿ ಬಗ್ಗೆ ಅಭಿರುಚಿ ಬೆಳೆಸಿದಾಗ ಮಾತ್ರ ಕೊಂಕಣಿ ಭಾಷೆ ಬೆಳೆಯಲು ಸಾಧ್ಯ” ಎಂದು ಮಾಹಿತಿ ನೀಡಿದರು.

New Project

ಕಾಲೇಜಿನ ಸಂಚಾಲಕ ರೆ| ಫಾ| ಬೊನವೆಂಚರ್ ನಝರತ್ ಅಧ್ಯಕ್ಷತೆ ವಹಿಸಿ ಮಾತನಾಡಿ “ಜನಪದ ಸಂಸ್ಕೃತಿ ಜಾತಿ, ಧರ್ಮ, ಪಂಥ ಇವುಗಳನ್ನು ಬೆಸೆಯುತ್ತದೆ . ಈ ಜನಪದ ಸಂಸ್ಕೃತಿ ಉಳಿಸಿ ಬೆಳೆಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ” ಎಂದು ಹೇಳಿದರು.

ಕ್ಯಾಥೋಲಿಕ್ ಬೋರ್ಡ್ ನ ನಿಯೋಜಿತ ಕಾರ್ಯದರ್ಶಿ ವಂ ಡಾ ಲಿಯೋ ಲಾಸ್ರದೋ , ವಿದ್ಯಾರ್ಥಿ ಪ್ರತಿನಿಧಿ ಆನ್ಸನ್ ಪಿಂಟೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ ಜಯವಂತ ನಾಯಕ್ ಪ್ರಾಸ್ತಾವಿಕ ಮಾತುಗಳನ್ನು ಆಡಿದರು.

ಮುಂಬೈ ಜಾನಪದ ಕಾರ್ಯಕರ್ತ ಶ್ರೀಯುತ ವಿಲ್ಸನ್ ಪಿಂಟೋ, ವಿಚಾರ ಸಂಕಿರಣದ ಪ್ರಧಾನ ಭಾಷಣಕಾರರಾಗಿ ಆಗಮಿಸಿದರು.
ತಾಂತ್ರಿಕ ಅಧಿವೇಶನದಲ್ಲಿ, ಕುಲಶೇಖರ್ ನ ಶ್ರೀಮತಿ ಐರಿನ್ ರೆಬೆಲ್ಲೋ, ಇವರು “ಕೊಂಕಣಿ ಕ್ರಿಶ್ಚಿಯನ್ ಜಾನಪದ ಮತ್ತು ಭವಿಷ್ಯ”, ಮಂಗಳೂರಿನ ಶ್ರೀಯುತ ಬಿಂದುಮಾಧವ ಶೆಣೈ, “ಕೊಂಕಣಿ ಜಿ. ಎಸ್ ಬಿ. ಜಾನಪದ ಮತ್ತು ಭವಿಷ್ಯ” ಪ್ಯಾನಲಿಸ್ಟ್ ರಾಗಿ ಮೂಡಬಿದ್ರಿ ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ,ಪ್ರಾಂಶುಪಾಲರಾದ ಡಾ ರೋಶನ್ ಪಿಂಟೋ ಮಾತನಾಡಿದರು.

New Project (2)

ಕಾಲೇಜಿನ ಪ್ರಾಂಶುಪಾಲ ರೆ| ಫಾ| ಮೈಕೆಲ್, ಸಾಂತುಮಯೋರ್ ಸ್ವಾಗತಿದರು. ಸಂಯೋಜಕಿ ಕು. ಟ್ರೆಸ್ಸಿ ಪಿಂಟೋ ವಂದಿಸಿದರು . ಹಿಂದಿ ವಿಭಾಗದ ಸಹಾಯಕ ಪ್ರಾದ್ಯಾಪಕಿ ಕು ಶ್ರಾವ್ಯ ಎನ್ ಕಾರ್ಯಕ್ರಮ ನಿರೂಪಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು