News Karnataka Kannada
Sunday, May 19 2024
ಕ್ಯಾಂಪಸ್

ಕುಂದಾಪುರ: ಮತದಾರರ ಜಾಗೃತಿ ಅಭಿಯಾನ, ಪ್ರತಿಜ್ಞಾ ವಿಧಿ ಸ್ವೀಕಾರ

Kundapur: Voter awareness campaign and oath-taking ceremony
Photo Credit : News Kannada

ಕುಂದಾಪುರ: ಇ.ಎಲ್.ಸಿ ಮತ್ತು ಎನ್.ಎಸ್.ಎಸ್ ಘಟಕಗಳು, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ತಾಲ್ಲೂಕು ಸ್ವೀಪ್ ಸಮಿತಿ ಬೈಂದೂರು ಸಹಯೋಗದೊಂದಿಗೆ ಮತದಾರರ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಬೈಂದೂರು ವಿಧಾನ ಸಭೆಯ ಚುನಾವಣಾ ಅಧಿಕಾರಿ ಜಗದೀಶ್ ಗಂಗಣ್ಣನವರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಮತಯಂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ತಾಲ್ಲೂಕು ಚುನಾವಣಾ ಸಹಾಯವಾಣಿಗೆ ಮಾಹಿತಿ ನೀಡುವಂತೆ ತಿಳಿಸಿದರು.

ಬೈಂದೂರು ತಹಶೀಲ್ದಾರ್ ಪ್ರಭು ಸ್ವಾಮಿ ಅವರು ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತಾಲ್ಲೂಕು ಕಚೇರಿ ಬೈಂದೂರು ಉಪ ತಹಶೀಲ್ದಾರ್ ಭೀಮಪ್ಪ ಹಾಗೂ ತಹಶೀಲ್ದಾರ ಕಛೇರಿಯ ಸಿಬ್ಬಂದಿವರ್ಗದವರು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇ.ಎಲ್.ಸಿ ಸಂಚಾಲಕರಾದ ಡಾ. ಶಿವಕುಮಾರ ಪಿ.ವಿ ಸ್ವಾಗತಿಸಿದರು.ನವೀನ್ ಹೆಚ್.ಜೆ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು