ಕುಂದಾಪುರ: ಇ.ಎಲ್.ಸಿ ಮತ್ತು ಎನ್.ಎಸ್.ಎಸ್ ಘಟಕಗಳು, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ಜಿಲ್ಲೆ ತಾಲ್ಲೂಕು ಸ್ವೀಪ್ ಸಮಿತಿ ಬೈಂದೂರು ಸಹಯೋಗದೊಂದಿಗೆ ಮತದಾರರ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಬೈಂದೂರು ವಿಧಾನ ಸಭೆಯ ಚುನಾವಣಾ ಅಧಿಕಾರಿ ಜಗದೀಶ್ ಗಂಗಣ್ಣನವರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾದರಿ ನೀತಿ ಸಂಹಿತೆ ಕುರಿತು ಹಾಗೂ ಮತಯಂತ್ರಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ತಾಲ್ಲೂಕು ಚುನಾವಣಾ ಸಹಾಯವಾಣಿಗೆ ಮಾಹಿತಿ ನೀಡುವಂತೆ ತಿಳಿಸಿದರು.
ಬೈಂದೂರು ತಹಶೀಲ್ದಾರ್ ಪ್ರಭು ಸ್ವಾಮಿ ಅವರು ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ಮತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾಲೇಜಿನ ಪ್ರಿನ್ಸಿಪಾಲ್ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತಾಲ್ಲೂಕು ಕಚೇರಿ ಬೈಂದೂರು ಉಪ ತಹಶೀಲ್ದಾರ್ ಭೀಮಪ್ಪ ಹಾಗೂ ತಹಶೀಲ್ದಾರ ಕಛೇರಿಯ ಸಿಬ್ಬಂದಿವರ್ಗದವರು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇ.ಎಲ್.ಸಿ ಸಂಚಾಲಕರಾದ ಡಾ. ಶಿವಕುಮಾರ ಪಿ.ವಿ ಸ್ವಾಗತಿಸಿದರು.ನವೀನ್ ಹೆಚ್.ಜೆ ವಂದಿಸಿದರು.