News Karnataka Kannada
Monday, April 29 2024
ಕ್ಯಾಂಪಸ್

ಕುವೆಂಪು ವಿವಿ: ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

Kuvempu
Photo Credit : News Kannada

ಶಂಕರಘಟ್ಟ: ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶನಿವಾರ ನಡೆದ ಈ-ಟಿವಿ ಭಾರತ್‌ನ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಜಾತಂತ್ರ ವ್ಯವಸ್ಥೆಯ ಪ್ರಮುಖ ಅಂಗವಾಗಿರುವ ಪತ್ರಿಕಾ ರಂಗಕ್ಕೆ ಕಾಲಿಡಲಿರುವ ಉದಯೋನ್ಮುಖ ಪತ್ರಕರ್ತರು ಸಮಾಜವನ್ನು ಒಗ್ಗೂಡಿಸುವ ಕಾರ್ಯನಿರ್ವಹಿಸಬೇಕಿದೆ. ಜಾತಿ, ಧರ್ಮ, ಸಮುದಾಯಗಳ ನಡುವಿನ ಬಿರುಕುಗಳನ್ನು ಗುಣಪಡಿಸುವ ಹೊಣೆಗಾರಿಕೆ ಅವರ ಮೇಲಿದೆ ಎಂದರು.

ಸಮಾಜದ ವಿವಿಧ ಸ್ಥರಗಳಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನೈಜ ವರದಿ ಮಾಡುವುದರ ಜೊತೆಗೆ ಜನಪರವಾದ ನೈತಿಕ ಮೌಲ್ಯ ಮತ್ತು ವೃತ್ತಿಪರತೆ ಪತ್ರಕರ್ತರಿಗೆ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗವು ಪ್ರಾಯೋಗಿಕ ಕಲಿಕೆಯ ಜೊತೆಗೆ ನೈತಿಕ ಮೌಲ್ಯಗಳಿಗೆ ಒತ್ತು ನೀಡುತ್ತಿದೆ ಎಂದರು.

ಪ್ರಾಧ್ಯಾಪಕ ಪ್ರೊ. ಡಿ. ಎಸ್. ಪೂರ್ಣಾನಂದ ಮಾತನಾಡಿ, ಕಳೆದ ದಶಕದಿಂದೀಚೆಗೆ ಎಲ್ಲ ಮಾಧ್ಯಮ ಸಂಸ್ಥೆಗಳು ಡಿಜಿಟಲ್ ವೇದಿಕೆಯನ್ನು ಪ್ರವೇಶಿಸುತ್ತಿವೆ. ಒಂದು ಕಾಲದಲ್ಲಿ ದಕ್ಷಿಣ ಭಾರತದ ಪ್ರಬಲ ಟಿ.ವಿ ವಾಹಿನಿಗಳ ಸಮೂಹವನ್ನು ಹೊಂದಿದ್ದ ರಾಮೋಜಿ ರಾವ್ ಒಡೆತನದ ಈ-ಟಿವಿ, ಡಿಜಿಟಲ್ ಕ್ಷೇತ್ರಕ್ಕೆ ದೊಡ್ಡ ಮಟ್ಟದಲ್ಲಿ ಕಾಲಿರಿಸಿದ ಮೊದಲ ಮುಖ್ಯವಾಹಿನಿಯ ಮಾಧ್ಯಮ ಸಂಸ್ಥೆ ಎಂದರೆ ತಪ್ಪಾಗಲಾರದು. ಭವಿಷ್ಯದಲ್ಲಿ ಪತ್ರಿಕೋದ್ಯಮವನ್ನು ಡಿಜಿಟಲ್ ಮಾಧ್ಯಮ ಆವರಿಸಿಕೊಳ್ಳಲಿದೆ ಎಂದರು.

ವಿಭಾಗದ ಮುಖ್ಯಸ್ಥ ಡಾ. ಸತೀಶ್ ಕುಮಾರ್, ಡಾ. ಸತ್ಯಪ್ರಕಾಶ್ ಎಂ. ಆರ್, ಈ-ಟಿವಿ ಭಾರತ್‌ನ ಶಿವಮೊಗ್ಗ ಜಿಲ್ಲಾ ವರದಿಗಾರ ಕಿರಣ್ ಕಂಕಾರಿ, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು