ಆಳ್ವಾಸ್‌ನಲ್ಲಿ ಮಹಾವೀರ ಜಯಂತಿ ಆಚರಣೆ: ಯಶೋಕಿರಣ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ಜೈನ ಧರ್ಮದಲ್ಲಿ ಸಂಯಮಕ್ಕೆ ಹೆಚ್ಚಿನ ಪ್ರಾಶಸ್ತ್ಯವಿದೆ. ಬದುಕಿನಲ್ಲಿ ತಾಳ್ಮೆ ಬಹು ಮುಖ್ಯ. ಇಲ್ಲವಾದರೆ ವ್ಯಕ್ತಿಯ ಜೀವನ ಅಸ್ತವ್ಯಸ್ತವಾಗುತ್ತದೆ. ಬದಲಾಗುತ್ತಿರುವ ಸಮಾಜದಲ್ಲಿ ಸರಳತೆಯನ್ನು ದೌರ್ಬಲ್ಯವೆಂದು ವ್ಯಾಖ್ಯಾನಿಸಲಾಗುತ್ತಿದೆ ಇದು ಸಲ್ಲದು. ಮನಸ್ ಶುದ್ಧಿ ಅಗತ್ಯ. ಬದುಕಿನ ತತ್ವ ತಿಳಿದುಕೊಳ್ಳುವುದೇ ನಿಜವಾದ ಆಧ್ಯಾತ್ಮ. ಈ ಮುಖೇನ ಭಗವಂತನನ್ನು ಸಂಧಿಸಬಹುದಾಗಿದೆ ಎಂದು ಶ್ರಿ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ಹೆಗ್ಗಡೆ ಹೇಳಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿ ಸಿರಿ ವೇದಿಕೆಯಲ್ಲಿ ನಡೆದ ಭಗವಾನ್ ಮಹಾವೀರ ಜಯಂತಿ ಆಚರಣೆಯಲ್ಲಿ ಸಂದೇಶ ನೀಡಿದರು.

ಮೂಡಬಿದಿರೆಯ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಮನುಷ್ಯನಲ್ಲಿ ಆತ್ಮ ಚಿಂತನೆ ಇರಬೇಕು. ಒಳಿತನ್ನು ಸದಾ ಪ್ರಶಂಸಿಸುವ ಗುಣ ಆತ ರೂಢಿಸಿಕೊಳ್ಳಬೇಕು. ಇದರಿಂದಾಗಿ ಒತ್ತಡ ರಹಿತ ಬದುಕು ಸಾಗಿಸಲು ಸಾಧ್ಯ. ಪರರ ಹಿತ, ಸಹನೆ, ಸಹಾಯ ಪ್ರವೃತಿಯಿಂದ ಮನಸ್ಸು ನಿಷ್ಕಲ್ಮಶ ಹೊಂದುತ್ತದೆ. ಸದ್ಗುಣ ಚಂಚಲ ಮನಸ್ಸನ್ನು ಸ್ಥಿರತೆ ಕಡೆಗೆ ಕೊಂಡೊಯ್ಯುತ್ತವೆ ಅದುವೇ ಆಧ್ಯಾತ್ಮ ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆವಹಿಸಿದರು. ಜಗತ್ತು ಅನುಸರಿಸಬೇಕಾದದ್ದು ಒಂದೇ ಧರ್ಮ ಅದು ಮಾನವ ಧರ್ಮ. ಜೀವನ ಸರಳ ಮಾಡಲು ದಾರ್ಶನಿಕರು ಅನೇಕ ಧರ್ಮ ಹುಟ್ಟುಹಾಕಿದರು. ಇಂದು ದೇಶದಲ್ಲಿ ಹಲವು ಭಾಷೆ, ಹಲವು ಧರ್ಮ, ಮತ, ಜಾತಿಗಳಿವೆ. ಪ್ರತಿ ಧರ್ಮಕ್ಕೂ ಗೌರವ ಕೊಡುತ್ತಾ ಸೌಹಾರ್ದತೆಯಿಂದ ಬಾಳಬೇಕು ಈ ಮುಖೇನ ಲೋಕಕ್ಕೆ ಶಾಂತಿಯ ಸಂದೇಶ ಸಾರಬೇಕು ಎಂದರು.

ದಿ.ಡಾ.ಬಿ ಯಶೋವರ್ಮರವರ ಸ್ಮರಣಾರ್ಥವಾಗಿ ನಿರ್ಮಿಸಿದ ಯಶೋಕಿರಣ ಕಟ್ಟಡವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆ ಉದ್ಘಾಟಿಸಿದರು.

ಪಾಶ್ವನಾಥ ಇಂದ್ರ ಪೂಜಾ ವಿಧಿವಿಧಾನವನ್ನು ನೆರೆವೇರಿಸಿದರು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಬಳಗದವರಿಂದ ಜಿನ ಗೀತೆ ಗಾಯನ- ಸಂಗೀತ ಮಾಧರ‍್ಯ ಜಿನಗಾನ ವಿಶಾರಧೆ ನಡೆಯಿತು. ಶಾಸ್ತ್ರೂಕ್ತವಾಗಿ ಜರುಗಿದ ಭಗವಾನ್ ಶ್ರೀ ಮಹಾವೀರ ಜಯಂತೆ ಆಚರಣೆಯು ತೋರಣ ಮಹೂರ್ತದೊಂದಿಗೆ ಪ್ರಾರಂಭವಾಗಿ ಜಿನ ಮೂರ್ತಿಗೆ ಅಭಿಷೇಕ ಹಾಗೂ ಅಷ್ಟವಿಧಾರ್ಚನೆ ಪೂಜಾ ವಿಧಾನದ ನಂತರ ಸಹಭೋಜನದೊಂದಿಗೆ ಮುಕ್ತಾಯವಾಯಿತು.

ಡಾ.ಬಿ ಯಶೋವರ್ಮ ಅವರ ಪತ್ನಿ ಸೋನಿ ವರ್ಮಾ, ಚೌಟರ ಅರಮನೆಯ ಕುಲದೀಪ್ ಎಂ, ಭಾರತೀಯ ಜೈನ ಮಿಲನ ವಲಯ 8 ಅಧ್ಯಕ್ಷ ಯುವರಾಜ ಭಂಡಾರಿ, ಬಸದಿಗಳ ಮೊಕ್ತೇಸರರಾದ ಸುದೇಶ ಕುಮಾರ ಪಟ್ಟಣಶೆಟ್ಟಿ, ದಿನೇಶ ಕುಮಾರ ಆನಡ್ಕ, ಉದ್ಯಮಿ ಕೆ ಶ್ರೀಪತಿ ಭಟ್, ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ಉಪಸ್ಥಿತರಿದ್ದರು. ಅಂಡಾರು ಗುಣಪಾಲ ಹೆಗ್ಡೆ ಸ್ವಾಗತಿಸಿ, ವಕೀಲೆ ಶ್ವೇತಾ ಜೈನ್ ಕಾರ‍್ಯಕ್ರಮ ನಿರೂಪಿಸಿದರು. ವಂದಿಸಿದರು.

ಯಶೋವರ್ಮರ ಸ್ಮರಣಾರ್ಥವಾಗಿ ಡಾ.ಎಂ ಮೋಹನ್ ಆಳ್ವರು ಕಟ್ಟಡಕ್ಕೆ ಯಶೋಕಿರಣ ಎಂದು ಹೆಸರಿಟ್ಟಿದ್ದಾರೆ.ಇದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಆಳ್ವರ ವ್ಯವಹಾರಿಕ ಜ್ಞಾನದ ಹೊರತಾಗಿ ಅವರ ವ್ಯಕ್ತಿತ್ವದಿಂದ ಜನಸಾಮಾನ್ಯರು ಕಲಿಯಬೇಕಾದದ್ದು ಸಾಕಷ್ಟು ಇವೆ. ಅವರ ಕಲಿಕೆ ಮತ್ತು ಕಲ್ಪನೆಯ ಸಮತೋಲನದಿಂದ ಇಂದು ಆಳ್ವಾಸ್ ಶಿಕ್ಷಣ ಸಂಸ್ಥೆ ಈ ಪರಿ ಬೆಳೆದು ನಿಂತಿದೆ.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago