News Karnataka Kannada
Tuesday, April 30 2024
ಮಂಗಳೂರು

ಮಂಗಳೂರು ವಿವಿ: ಸೆ. 29 ರಂದು 43ನೇ ಸಂಸ್ಥಾಪನಾ ದಿನಾಚರಣೆ

Invita
Photo Credit : By Author

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 43 ನೇ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್‌ 29 (ಗುರುವಾರ) ರಂದು ಅಪರಾಹ್ನ 2.30 ಕ್ಕೆ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕದ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿ ಸುನಿಲ್‌ ಕುಮಾರ್‌, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ಯು ಟಿ ಖಾದರ್‌, ವೇದವ್ಯಾಸ ಕಾಮತ್‌, ವಿಧಾನ ಪರಿಷತ್‌ ಸದಸ್ಯ ಎಸ್‌ ಎಲ್‌ ಭೋಜೇಗೌಡ ಗೌರವಾನ್ವಿತ ಅತಿಥಿಗಳಾಗಿರಲಿದ್ದಾರೆ.

ಅಂತಾರಾಷ್ಟ್ರೀಯ ತರಬೇತುದಾರ ಡಾ. ಭರತ್‌ ಚಂದ್ರ ಸಂಸ್ಥಾಪನಾ ದಿನಾಚರಣೆಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಸಾಧಕರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ನಿಕೇತನ, ಕೊಡವೂರು, ಉಡುಪಿ ಇಲ್ಲಿನ ಕಲಾವಿದರಿಂದ ʼನೃತ್ಯ ಸಿಂಚನʼ ಕಾರ್ಯಕ್ರಮ ನಡೆಯಲಿದೆ ಎಂದು ಕುಲಸಚಿವರು ಹಾಗೂ ಕಾರ್ಯಕ್ರಮ ಸಂಯೋಜಕರ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು