ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯವು ‘ಗ್ರಂಥಾಲಯಗಳ ಪರಿವರ್ತನೆ ಮತ್ತು ಎನ್ಇಪಿ 2020’ ಕುರಿತು ರಾಷ್ಟ್ರೀಯ ಕಾರ್ಯಾಗಾರವನ್ನು ಮಂಗಳಗಂಗೋತ್ರಿಯ ಎಂ ಎನ್ ವಿಶ್ವನಾಥಯ್ಯ ಸಭಾಂಗಣದ ಉಪನ್ಯಾಸ ಸಭಾಂಗಣದಲ್ಲಿ ಆಗಸ್ಟ್ 8 (ಸೋಮವಾರ) ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಿದೆ.
ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ವಿ.ಜಿ.ತಳವಾರ ಸಮಾರಂಭವನ್ನು ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯದ ಗ್ರಂಥಪಾಲಕ (ನಿವೃತ್ತ) ಡಾ.ಎಂ.ಕೆ.ಭಂಡಿ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು.
ಸಮಾರೋಪ ಸಮಾರಂಭದಲ್ಲಿ ಸುರತ್ಕಲ್ ಎನ್ ಐಟಿಕೆ ಗ್ರಂಥಾಲಯದ ಗ್ರಂಥಪಾಲಕ ಡಾ.ಮಲ್ಲಿಕಾರ್ಜುನ ಅಂಗಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಸಿ ಕೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.