ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ‘ಭಾರತ ರತ್ನ’ ಡಾ.ಬಿ.ಆರ್.ಅಂಬೇಡ್ಕರ್ ಅವರ 132 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಮಂಗಳಗಂಗೋತ್ರಿ ಮಂಗಳಾ ಸಭಾಂಗಣದಲ್ಲಿ ಆಯೋಜಿಸಿದೆ.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಾಡಿತ್ತಾಯ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಭಾಗ ಇತಿಹಾಸ ಪ್ರಾಧ್ಯಾಪಕ ಪ್ರೊ.ಎನ್.ಚಿನ್ನಸ್ವಾಮಿ ಸೋಸಲೆ ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರ ಪಂಪನ ಕಲಾವಿದರು “ಅಂಬೇಡ್ಕರ್” ಎಂಬ ಸಾಮಾಜಿಕ ನಾಟಕವನ್ನು ಪ್ರಸ್ತುತಪಡಿಸದ್ದಾರೆ. ಎಂದು ರಿಜಿಸ್ಟ್ರಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.