News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರ

Mangaluru: A practical training workshop at The Excellent Institute of Excellence
Photo Credit : News Kannada

ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆ ಪ್ರಾಯೋಗಿಕ ತರಬೇತಿ ಕುರಿತು ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಯಿತು.

ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ವೈಜ್ಞಾನಿಕ ಬೆಳವಣಿಗೆಗೆ ಅಟಲ್ ಟಿಂಕರಿಂಗ್ ಲ್ಯಾಬ್ ಸಹಕಾರಿಯಾಗಿದೆ ಎಂದರು.

ಅಟಲ್ ಟಿಂಕರಿಂಗ್ ಲ್ಯಾಬ್ ನೋಡಲ್ ಅಧಿಕಾರಿ, ಡಯಟ್ ಉಪನ್ಯಾಸಕಿ ವೇದಾವತಿ ಬಿ.ಕೆ ತಂತ್ರಜ್ಞಾನಕ್ಕೆ ಸಂಬAಧಿಸಿದAತೆ ಕಾರ್ಯಗಾರ ಜ್ಞಾನವನ್ನು ಮೂಡಿಸಲಿದೆ ಎಂದರು.

ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆವಹಿಸಿದರು. ಅಟಲ್ ಟಿಂಕರಿಂಗ್‌ ಲ್ಯಾಬ್‌ ನಿಂದ ವಿದ್ಯಾರ್ಥಿಗಳಲ್ಲಿ ಹಲವಾರು ಸೃಜನಾತ್ಮಕ ಚಿಂತನೆಗಳು ಹಾಗೂ ಆವಿಷ್ಕಾರಗಳ ಬೆಳವಣಿಗೆ ಹೆಚ್ಚಾಗುತ್ತದೆ ಎಂದರು.

ಸ್ಮಿತಾ ಮಿರಾಂದ, ಸಿಆರ್‌ಪಿ ಮಹೇಶ್ವರಿ ಮತ್ತು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಉಪಸ್ಥಿತರಿದ್ದರು.
ಮಾಸ್ಟರ್ ಟ್ರೆನರ್ ಸುನೀಲ್ ಕುಮಾರ್ ಎಚ್.ಪಿ ಕಾರ್ಯಾಗಾರ ನಡೆಸಿಕೊಟ್ಟರು.

ಶಿಕ್ಷಕ ವಿನಯಚಂದ್ರ ಜೈನ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ವಂದಿಸಿದರು. ಶಿಕ್ಷಕ ನಿರಂಜನ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ವಿಜ್ಞಾನ ಶಿಕ್ಷಕರು, ಅಟಲ್ ಟಿಂಕರಿAಗ್ ಲ್ಯಾಬ್ ಉಸ್ತುವಾರಿಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ 33 ಶಿಕ್ಷಕರು ಭಾಗವಹಿಸಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು