ಮಂಗಳೂರು: ಉಚಿತ ಶ್ರವಣ ಸಾಧನಗಳ ವಿತರಣೆ ಶಿಬಿರ

ಮಂಗಳೂರು: ಫಾದರ್ ಮುಲ್ಲರ್ ಕಾಲೇಜು ವಾಕ್- ಶ್ರವಣ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಶ್ರವಣ ನ್ಯೂನ್ಯತೆಯುಳ್ಳವರ ವಾರದ ಅಂಗವಾಗಿ ಕೇಂದ್ರ ಸರಕಾರದ ಎಡಿಐಪಿ ಯೋಜನೆಯಡಿ ಉಚಿತ ಶ್ರವಣ ಸಾಧನಗಳ ವಿತರಣೆ ಶಿಬಿರ ಸೆ. ೨೬ರಿಂದ ೨೮ರವರೆಗೆ ಆಯೋಜಿಸಲಾಗಿದೆ ಎಂದು ಫಾದರ್ ಮುಲ್ಲರ್ ಕಾಲೇಜಿನ ಪ್ರೊ. ಅಖಿಲೇಶ್ ಪಿಎಂ ತಿಳಿಸಿದ್ದಾರೆ.

ಮಂಗಳೂರಿನ ‌ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗಳ ಮೂಲಕ ಕೇಂದ್ರ ಸರಕಾರದ ಯೋಜನೆಯಡಿ ಶ್ರವಣ ಸಾಧನಗಳ ವಿತರಣೆ ಈಗಾಗಲೇ ನಡೆಯುತ್ತಿದ್ದು, ಖಾಸಗಿ ಆಸ್ಪತ್ರೆಗಳ ಮೂಲಕ ಉಚಿತವಾಗಿ ಅರ್ಹರಿಗೆ ಶ್ರವಣ ಸಾಧನ ಸಲಕರಣೆಗಳನ್ನು ವಿತರಿಸುವ ಅವಕಾಶ ಫಾದರ್ ಮುಲ್ಲರ್ ಸಂಸ್ಥೆಗೆ ಲಭಿಸಿದೆ. ಈಗಾಗಲೇ ೧೫೦ ಸಾಧನಗಳು ಬಂದಿರುವುದಾಗಿ ಹೇಳಿದರು.

ಶಿಬಿರದಲ್ಲಿ ಶೇ. ೪೦ಕ್ಕಿಂದ ಅಧಿಕ ಶ್ರವಣ ದೋಷವುಳ್ಳ ಬಿಪಿಎಲ್ ಕಾರ್ಡುದಾರರಿಗೆ ಈ ಉಚಿ ಸಲಕರಣೆ ತಪಾಸಣೆಯ ಬಳಿಕ ನೀಡಲಾಗುವುದು. ಕಳೆದ ಮೂರು ವರ್ಷಗಳಲ್ಲಿ ಸರಕಾರದಿಂದ ನೆರವು ಅಥವಾ ಈ ಸೌಲಭ್ಯವನ್ನು ಉಚಿತವಾಗಿ ಪಡೆದಿರದವರಿಗೆ ಶಿಬಿರದಲ್ಲಿ ಸ್ಥಳದಲ್ಲೇ ವಿತರಿಸಲಾಗುವುದು. ಸೆ. ೨೬ರಂದು ಬೆಳಗ್ಗೆ ೧೦ ಗಂಟೆಗೆ ಶಿಬಿರ ಉದ್ಘಾಟನೆಗೊಳ್ಳಲಿದ್ದು, ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮುಂಬೈ ಐಜ್ನಿಹ್ ನಿರ್ದೇಶಕ ಡಾ. ಅರುಣ್ ಬಾಂಕ್ ಗೌರವ ಅಥಿತಿಯಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಬಳಿಕ‌ ಫಾದರ್ ಮುಲ್ಲರ್ ಚಾರಿಟೆಬಲ್ ಸಂಸ್ಥೆಯ ನಿರ್ದೇಶಕ ರೆ.ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಮಾತನಾಡಿ, ಉಚಿತ ಶ್ರವಣ ಸಾಧನ ವಿತರಣಾ ಶಿಬಿರದ ಜತೆಯಲ್ಲಿ ಹಿರಿಯರಿಗೆ ಉಚಿತ ಶ್ರವಣ ಪರೀಕ್ಷೆ, ಶ್ರವಣ ಸಾಧನಗಳ ಉಚಿತ ಪ್ರಯೋಗ, ಸಬ್ಸಿಡಿ ದರದಲ್ಲಿ ಶ್ರವಣ ಸಾಧನಗಳ ವಿತರಣೆಯೂ ನಡೆಯಲಿದೆ, ೨೪ರಂದು ಸ್ಕಿಲ್ ಎಜುಕಾನ್ ೨೦೨೦ ಉದ್ಘಾಟನೆ ಫಾದರ್ ಮುಲ್ಲರ್ ಮೆಡಿಕಲ್ ಎಜುಕೇಶನ್ ಘಟಕ ಮತ್ತು ಫಾದರ್ ಮುಲ್ಲರ್ ಸಿಮ್ಯುಲೇಶನ್ ಆ್ಯಂಡ್ ಸ್ಕಿಲ್ ಸೆಂಟರ್ ವತಿಯಿಂದ ಸೆ. ೨೪ರಂದು ಸ್ಕಿಲ್ ಎಜುಕಾನ್ ೨೦೨೨ ಕಾರ್ಯಾಗಾರವು ನಡೆಯಲಿದೆ ಎಂದವರು ಹೇಳಿದರು.

ಈ ವೇಳೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿಗಳಾದ .ಫಾ. ನೆಲ್ಸನ್ ಧೀರಜ್ ಪಾಯಸ್, .ಫಾ. ಜಾರ್ಜ್ ಜೀವನ್ ಸಿಕ್ವೇರಾ, ವೈದ್ಯಕೀಯ ಅಧೀಕ್ಷರಾದ ಡಾ. ಉದಯ ಕುಮಾರ್ ಕೆ. ಮತ್ತಿತರರು ಉಪಸ್ಥಿತರಿದ್ದರು.

Ashika S

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

14 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

25 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

49 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

1 hour ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

2 hours ago