ಕ್ಯಾಂಪಸ್

ಮಂಗಳೂರು: ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್‌ಗಳ ಉದ್ಘಾಟನೆ

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ ಸ್ಟೂಡೆಂಟ್ ಕೌನ್ಸಿಲ್, ಕಾಲೇಜು ಸಂಘಗಳು, ಯುಜಿಸಿ ವೃತ್ತಿ ಆಧಾರಿತ, ಉಚಿತ ಆಡ್-ಆನ್, ಕಾಲೇಜು ಡಿಪ್ಲೋಮಾ ಕೋರ್ಸ್‌ಗಳು ಉದ್ಘಾಟನ ಸಮಾರಂಭ ಮಿಲಾಗ್ರಿಸ್‌ ಕಾಲೇಜಿ ನಲ್ಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಫಾ| ಮೈಕಲ್ ಸಾಂತುಮಾಯೋ‌ ವಿದ್ಯಾರ್ಥಿ ನಾಯಕನಿಗೆ ಹಾಗೂ ಇತರ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು ಮಂಗಳೂರು ಬೆಂದೂರು,ಸೆಬಾಸ್ಟಿಯನ್ ಚರ್ಚ್ ನ ಧರ್ಮ ಗುರುಗಳು ಹಾಗೂ ವಿಕಾರ್ ವೀರ್ ಇಸಿಡೀನರಿ ವo.ಗುರು.ವಿನ್ಸೆಂಟ್ ಫ್ರಾನ್ಸಿಸ್ ಮೊಂತೇರೊ ಮುಖ್ಯ ಅಥಿತಿಯಾಗಿ ಆಗಮಿಸಿ ಮಾತನಾಡಿದ ಇವರು ವಿದ್ಯಾರ್ಥಿಗಳು ದೇಶದ ಯುವ ಶಕ್ತಿಗಳಾಗಿದ್ದು ಏಕಾಗ್ರಚಿತ್ತದಿಂದ ಧನಾತ್ಮಕ ವಿಚಾರಗಳ ಬಗ್ಗೆ ಮನಸ್ಸು ಕೇಂದ್ರಿಕರಿಸಿದ್ದಲ್ಲಿ ತಮ್ಮ ಅವಿರತ ಪರಿಶ್ರಮದಿಂದ ಬಹುದೊಡ್ಡ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ  ಎಂದು ಕರೆ ನೀಡಿದರು.

ಅಧ್ಯಕ್ಷತೆಯನ್ನು ವಹಿಸಿರುವ ಮಿಲಾಗ್ರಿಸ್ ಕಾಲೇಜಿನ ಸಂಚಾಲಕರಾಗಿರುವ ವಂ. ಗುರು ಬೋನವೆಂಚೆರ್ ನಝರೆತ್ ಆಯ್ಕೆ ಆದ ಪದಾಧಿಕಾರಿಗಳು ಶುಭ ಹಾರೈಸಿದರು. ಗೌರವ ಅತಿಥಿಯಾಗಿ ಪರ್ಸನಲ್ ಇನ್ವೆಸ್ಟ್ ಮೆಂಟ್ ನ ತರಬೇತಿದಾರರಾಗಿರುವ ಸಪ್ನಾ ಶೆನೈ ಮಾತನಾಡಿ ವಿದ್ಯಾರ್ಥಿಗಳು ಬಾಲ್ಯದಲ್ಲಿ ನಾಯಕತ್ವ ಗುಣವನ್ನು ಮೈ ಗೂಡಿಸಿ ಕೊಂಡರೆ ಸಾಮಾಜದ ಏಳಿಗೆಗೆ ಕಾರಣವಾಗುವುದರಲ್ಲಿ ಸಂಶಯವಿಲ್ಲಎಂದು ಹೇಳಿದರು.

ಉಪನ್ಯಾಸಕರಾದ  ಜೋಬಿನ್, ಹಾಗೂ  ಅಖಿಲ್ , ಪದಾಧಿಕಾರಿಗಳಾದ ಜೋಸ್ಟನ್ ಡಿಸೋಜ,ಅನುಷಾ ಮೊನ್ತೆರೊ, ಅಶ್ವಿನ್ ಒರ್ನೆಲೋ, ಸೈಮಾ ರೈ ಮುಂತಾದವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಫಾ| ಮೈಕಲ್ ಸಾಂತುಮಾಯೋ‌ ಸ್ವಾಗತಿಸಿದರು. ವಿದ್ಯಾರ್ಥಿ ನಿಕ್ಸನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪಪ್ರಾಂಶು ಪಾಲರಾದ ಕ್ಯಾಸಿನ್ ರೊಡಿಗೆಸ್ ವಂದಿಸಿದರು.

Ashika S

Recent Posts

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

15 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

34 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

50 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago