ಕ್ಯಾಂಪಸ್

ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ ಕನಕದಾಸ ಜಯಂತಿ ಆಚರಣೆ

ಮಂಗಳೂರು: ನವೆಂಬರ್ 10, 2022 ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜು ಐಕ್ಯೂಎಸಿ ಮತ್ತು ಕನ್ನಡ ವಿಭಾಗದ ವತಿಯಿಂದ ಕನಕದಾಸ ಜಯಂತಿಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು, ಬೆಸೆಂಟ್ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ರವಿರಾಜ್ ಎಸ್ ಇವರು ಕನಕದಾಸರ ಕೀರ್ತನೆಗಳಲ್ಲಿ ಭಕ್ತಿಯ ಸ್ವರೂಪ ಮತ್ತು ಸಮಾಜ ವಿಮರ್ಶೆ ಎಂಬ ವಿಷಯದ ಬಗ್ಗೆ ಮಾತನಾಡಿ15-16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು.

ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ದಾಸ ಸಾಹಿತ್ಯದ ಮೂಲಕ ಗಮನಸೆಳೆದವರು ಕನಕದಾಸರು. ಜಾತಿ,ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತವರೇಣ್ಯರು ಕನಕದಾಸರು.ದಾಸ ಪರಂಪರೆಯ 50ಕ್ಕೂ ಹೆಚ್ಚು ದಾಸರಲ್ಲಿಕನಕದಾಸರು ಒಬ್ಬರು. ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮೂಡಿಸಿದರು.

ಮಿಲಾಗ್ರಿಸ್ ಕಾಲೇಜಿನ ಉಪ ಪ್ರಾಂಶುಪಾಲರಾದ  ಕ್ಸಾಸ್ಸಿನ ರೋಡ್ರಿಗೆಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದ ಸಂಯೋಜಕಿ, ಹಾಗೂ ವಿಭಾಗದ ಮುಖ್ಯಸ್ಥೆ ಸೌಮ್ಯ ಕೋಟ್ಯಾನ್ ಸ್ವಾಗತಿಸಿದರು, ವಿದ್ಯಾರ್ಥಿಗಳಾಗಿರುವ ಅರ್ಪಿತಾ ಕಾರ್ಯಕ್ರಮ ನಿರೂಪಿಸಿರು, ಜೋಯಿಲಿನ್ ವಂದಿಸಿದರು.

Ashika S

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

7 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

8 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

17 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

32 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

46 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

48 mins ago