News Karnataka Kannada
Tuesday, April 30 2024
ಕ್ಯಾಂಪಸ್

ಮಂಗಳೂರು: ಮಿಲಾಗ್ರಿಸ್ ಕಾಲೇಜು, ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮ

College
Photo Credit : By Author

ಮಂಗಳೂರು: ಅಕ್ಟೋಬರ್ 02, 2022 ರಂದು ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಮೆಲ್ವಿನ್ ವಾಸ, ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಅವರು ಗಾಂಧೀಜಿಯ ಜೀವನ ಹಾಗೂ ಸಿದ್ಧಾಂತಗಳ ಬಗ್ಗೆ ವಿಶ್ಲೇಷಿಸಿ ಆ ಮೌಲ್ಯಗಳನ್ನು ನಾವು ನಮ್ಮ ಜೀವನದಲ್ಲಿ ಕೂಡ ಅಳವಡಿಸಿಕೊಳ್ಳುವ ಅಗತ್ಯ ಇದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ. ಗುರು ಮೈಕಲ್ ಸಂತುಮಾಯೋರ್ ವಹಿಸಿದರು. ಮಿಲಾಗ್ರಿಸ್ ಪ್ರೌಢ ಶಾಲೆಯ ಪ್ರಾಂಶುಪಾಲರು ಶ್ರೀ ಸ್ಟೆ ನಿ ಬರೆಟ್ಟೋ, ಮಿಲಾಗ್ರಿಸ್ ಸೆಂಟ್ರಲ್ ಸ್ಕೂಲ್ ಇಲ್ಲಿನ ಪ್ರಾಂಶುಪಾಲರಾದ ವಂ. ಗುರು ಜೋಸೆಫ್ ಉದಯ್ ಮತ್ತಿತರರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರೆಲ್ಲರು ಗಾಂಧೀಜಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ಪ್ರಾರ್ಥನಾ ವಿಧಿಯನ್ನು ಮಿಲಾಗ್ರಿಸ್ ಸೆಂಟ್ರಲ್ ಶಾಲೆಯ ಉಪನ್ಯಾಸಕ ವೃಂದ ನಡೆಸಿಕೊಟ್ಟರು. ದೇಶ ಭಕ್ತಿಗೀತೆಯನ್ನು ಶ್ರೀ ಸ್ಟೆನಿ ಬರೆಟ್ಟೋ ಹಾಗೂ ಅವರ ತಂಡ ನಡೆಸಿ ಕೊಟ್ಟರು.

ಎನ್ ಎಸ್ ಎಸ್ ಸ್ವಯಂಸೇವಕಿ ಕು. ಅಂಜುಮ್ ಈ ದಿನದ ಮಹತ್ವವನ್ನು ಉಲ್ಲೇಖಿಸಿದರು. ಕು. ಸುರಯ್ಯ ಸದಾಫ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಕಾರ್ಯಕ್ರಮದ ಬಳಿಕ ಕಾಲೇಜಿನ ರಾಷ್ಟ್ತ್ರೀಯ ಸೇವಾ ಯೋಜನೇ (ಎನ್.ಎಸ್.ಎಸ್) ಹಾಗೂ ಎನ್ ಸಿ ಸಿ ಘಟಕಗಳ ವತಿಯಿಂದ ಸುಲ್ತಾನ್ ಬತ್ತೇರಿ ಹಾಗೂ ಸುತ್ತಮುತ್ತಲು ಸ್ವಚ್ಚತಾ ಅಭಿಯಾನ ಕೈಗೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು