ಮಂಗಳೂರು: “ಲೀಡ್ ಟು ವಿನ್” ಸ್ವಸ್ತಿಕ ಲೀಡರ್‌ಶಿಪ್ ಬೂಟ್ ಕ್ಯಾಂಪ್ ಕಾರ್ಯಗಾರ

ಮಂಗಳೂರು: ಸ್ವಸ್ತಿಕ ನ್ಯಾಷನಲ್ ಸ್ಕೂಲ್ ಊರ್ವ ಸ್ಟೋರ್ ಮಂಗಳೂರು ಇವರ ಆಶ್ರಯದಲ್ಲಿ ನಡೆಯುವ ಎರಡು ದಿನಗಳ “ಲೀಡ್ ಟು ವಿನ್”, ಸ್ವಸ್ತಿಕ ಲೀಡರ್‌ಶಿಪ್ ಬೂಟ್ ಕ್ಯಾಂಪ್ ಎಂಬ ಕಾರ್ಯಗಾರದ ಉದ್ಘಾಟನಾ ಸಮಾರಂಭವು ಹೋಟೆಲ್ ಎ.ಜೆ. ಗ್ರಾಂಡ್, ಮಂಗಳೂರು ಇಲ್ಲಿ ನಡೆಯಿತು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿ ಆರ್. ಡಿ ಕಿಣಿಯವರಿಗೆ “ಸ್ವಸ್ತಿಕ ಉದ್ಯಮ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಮೊದಲಿಗೆ ಸಂಸ್ಥೆಯ ವಿದ್ಯಾರ್ಥಿಗಳಾದ ಸಂಜಯ್ ಪ್ರಥಮ ಬಿಕಾಂ, ವರುಣ್ ಪ್ರಭು ಮತ್ತು ರಘುನಂದನ್ ಶರ್ಮ ತೃತೀಯ ಬಿಬಿಎ ಇವರ ಹೊಸ ಉದ್ಯಮವನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಗಾರವನ್ನು ಉದ್ಘಾಟಿಸಿದ ಶ್ರೀ ರಘುನಾಥ್ ಸೋಮಯಾಜಿ ಜಿ, ವ್ಯವಸ್ಥಾಪನ ನಿರ್ದೇಶಕರು ಸೋಮಯಾಜಿ ಎಸ್ಟೇಟ್ ಇವರು ಮಾತನಾಡಿ ಮನುಷ್ಯನ ಪ್ರಯತ್ನ ಮತ್ತು ದೇವರ ದಯೆ ಇದ್ದರೆ ನಾವು ಏನನ್ನಾದರೂ ಸಾಧಿಸಬಹುದು, ಇಂದು ತಮ್ಮ ಉದ್ಯಮ ಜೀವನವನ್ನು ಪ್ರಾರಂಭಿಸಿದ ಪ್ರಥಮ ಬಿಕಾಂ ವಿದ್ಯಾರ್ಥಿ ಸಂಜಯ್ ಮತ್ತು ಹಂತ ಹಂತವಾಗಿ ಬೆಳೆಯುತ್ತಾ ಬಂದ ತೃತೀಯ ಬಿಬಿಎ ವಿದ್ಯಾರ್ಥಿಗಳಾದ ವರುಣ್ ಪ್ರಭು ಮತ್ತು ರಘುನಂದನ್ ಶರ್ಮ ಇವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು.

ಉದ್ಯೋಗಿಯಾಗುವುದು ಬಹಳ ಸುಲಭ ಆದರೆ ಉದ್ಯಮಿಯಾಗುವುದು ಕಷ್ಟ. ಹಠ ಸಾಧನೆಯಿಂದ ಜೀವನದಲ್ಲಿ ಸಫಲತೆಯನ್ನು ಸಾಧಿಸಬಹುದು ಎಂಬುದಾಗಿ ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾಕ್ಟರ್ ಗಣಪತಿ ಪಿ ವೈದ್ಯಕೀಯ ನಿದೇರ್ಶಕರು, ಮಂಗಳ ಆಸ್ಪತ್ರೆ ಮತ್ತು ಆರ್. ಡಿ ಕಿಣಿ ನಿದೇರ್ಶಕರು ಬೆಲ್ ಪೇಂಟ್ಸ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸಂಸ್ಥೆಯ ಅಧ್ಯಕ್ಷರಾದ ಡಾ. ರಾಘವೇಂದ್ರ ಹೊಳ್ಳ ಇವರು ಸ್ವಾಗತಿಸಿ,  ದೀಪಾ ಶೆಟ್ಟಿ ವಂದಿಸಿದರು, ಕುಮಾರಿ ಪೂಜ ರಾವ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಾಲಿನಿ ಎನ್ ಹೆಬ್ಬಾರ್, ಸಂಪನ್ಮೂಲ ವ್ಯಕ್ತಿಗಳಾದ ಸಂಧ್ಯಾವರ್ಮ ಹಾಗೂ ರಾಕೇಶ್ ಶರ್ಮ ಉಪಸ್ಥಿತರಿದ್ದರು.

Gayathri SG

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

17 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

43 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

51 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago