ಮಂಗಳೂರು: ಸುಮನ ಬೋಳಾರ್ ಇವರಿಗೆ ಮಂಗಳೂರು ವಿವಿಯಿಂದ ಡಾಕ್ಟರೇಟ್ ಪದವಿ

ಮಂಗಳೂರು:  ರಥಬೀದಿಯಲ್ಲಿರುವ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿರುವ  ಸುಮನ ಬೋಳಾರ್  ಇವರು ಮಂಗಳೂರು ವಿವಿ ಸಮಾಜಶಾಸ್ತ್ರ ವಿಭಾಗದ ಪ್ರೊ. ವಿನಯ್ ರಜತ್ ಇವರ ಮಾರ್ಗದರ್ಶನದಲ್ಲಿ “ಹದಿಹರೆಯದ ಕಾಲೇಜು ವಿದ್ಯಾರ್ಥಿಗಳ ನಡವಳಿಕೆಯ ಮೇಲೆ ಸಮಾಲೋಚನೆಯ ಪ್ರಭಾವ ಕುರಿತ ಸಮಾಜಶಾಸ್ತ್ರೀಯ ಅಧ್ಯಯನ”ಎಂಬ ವಿಷಯದಲ್ಲಿ  ನಡೆಸಿದ ಸಂಶೋಧನಾ ಮಹಾಪ್ರಬಂಧಕ್ಕೆ  ಮಂಗಳೂರು ವಿವಿಯು ಡಾಕ್ಟರೇಟ್ ಪದವಿಯನ್ನು ನೀಡಿದೆ.  ಇವರು ದಿವಂಗತ ಜಪ್ಪು ಕಡೇಕಾರ್ ಮಾಧವ ಪುತ್ರನ್ ಹಾಗೂ ಬಿ.ಎಸ್.ಎನ್.ಎಲ್. ನಿವೃತ್ತ ಉದ್ಯೋಗಿ  ಪದ್ಮಾವತಿ ಪುತ್ರನ್ ಇವರ ಪುತ್ರಿಯಾಗಿದ್ದು,  ಶ್ರೀ ನಳೀನ್ ಕುಮಾರ್ ಕಟೀಲು ಇವರ ಆಪ್ತ ಕಾರ್ಯದರ್ಶಿಯಾಗಿರುವ  ಕೆ. ಸುಧಾಕರ್ ಇವರ ಪತ್ನಿ.

ಮಂಗಳೂರು ವಿವಿಯಲ್ಲಿ ವೃತ್ತಿ ಜೀವನ ಆರಂಭಿಸಿದ ಇವರು 2009 ರಲ್ಲಿ ಕೆ.ಪಿಎಸ್.ಸ್ಸಿ. ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜು ಸಮಾಜಶಾ ಉಪನ್ಯಾಸಕಿಯಾಗಿ ಕುರ್ನಾಡು ಹಾಗೂ ಕಾವೂರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2014ರ ಕೆ.ಎ.ಎಸ್. ಪರೀಕ್ಷೆಯ ಪೊಲೀಸ್ ಸೇವೆಯಲ್ಲಿ 26ನೇ ರ‍್ಯಾಂಕ್ ಪಡೆದು ಡಿ.ವೈ.ಎಸ್.ಪಿ. ಹುದ್ದೆ ಹಾಗೂ ಕೆ.ಇ.ಎ. ಮೂಲಕ ಸಹಾಯಕ  ಪ್ರಾಧ್ಯಾಪಕ ಹುದ್ದೆ ಹೀಗೆ ಎರಡೂ ಹುದ್ದೆಗಳಿಗೂ ಅಯ್ಕೆಗೊಂಡ        ಇವರುಶಿಕ್ಷಕ ವೃತ್ತಿಯಲ್ಲಿ ಇವರಿಗಿದ್ದ ಪ್ರೀತಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನೇ ಆಯ್ದುಕೊಂಡು ಸೇವೆ ಸಲ್ಲಿಸುತ್ತಿದ್ದಾರೆ.

ಇವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗೂ ಅದರ ಮಹಿಳಾ ಮತ್ತು ಮಕ್ಕಳ ಸುರಕ್ಷಾ ಉಪಸಮಿತಿಯ ನಿರ್ದೇಶಕರಾಗಿದ್ದಾರೆ.  ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ, ಮಾರ್ಗದರ್ಶನ ಹಾಗೂ ಪ್ರಶ್ನೋತ್ತರಗಳ 100ಕ್ಕೂ ಹೆಚ್ಚಿನ ಯೂಟ್ಯೂಬ್ ಸರಣಿಗಳು ಇವರ “ಸಮರ್ಥ್ ಭಾರತ್ ಚಾನಲ್ ನಲ್ಲಿ ಉಚಿತವಾಗಿ ಲಭ್ಯವಿವೆ.

Ashika S

Recent Posts

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

23 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

31 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

37 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

53 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

54 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

1 hour ago