News Karnataka Kannada
Monday, April 29 2024
ಕ್ಯಾಂಪಸ್

ಮಂಗಳೂರು: ಯೆನೆಪೋಯ ಆಯುರ್ವೇದ ಕಾಲೇಜಿನಲ್ಲಿ ಕಸಿ ವಿಧಾನಗಳ ತರಬೇತಿ ಕಾರ್ಯಾಗಾರ

Transplant methods training workshop at Yenepoya Ayurveda College
Photo Credit : News Kannada

ಮಂಗಳೂರು: ಯೆನೆಪೋಯ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ನರಿಂಗಾನ, ಮಂಗಳೂರು ದ್ರವ್ಯಗುಣ ವಿಜ್ಞಾನ ವಿಭಾಗದ ವತಿಯಿಂದ ಕಸಿ ವಿಧಾನಗಳು ಇದರ ಮಾಹಿತಿ ಕಾರ್ಯಾಗಾರ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಚ್. ಅವರು ವಹಿಸಿದ್ದರು. ವ್ಯಕ್ತಿಯ ಆರೋಗ್ಯವನ್ನು ಕಾಪಾಡುವಲ್ಲಿ ಸಸ್ಯಗಳ ಪ್ರಾಮುಖ್ಯತೆಯನ್ನು ತಿಳಿಸುವುದರೊಂದಿಗೆ ಮುಂಬರುವ ದಿನಗಳಲ್ಲಿ ಸಂಸ್ಥೆಯಲ್ಲಿ ಔಷಧೀಯ ಸಸ್ಯಗಳ ನರ್ಸರಿಯನ್ನು ಮಾಡುವ ಆಶಯವನ್ನು ತಿಳಿಸಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ವಸಂತ್ ಎನ್ ಅವರು ವಿವಿಧ ರೀತಿಯ ಕಸಿ ವಿಧಾನಗಳನ್ನು ಹೇಳುವುದರ ಜೊತೆಗೆ ಪ್ರಾಯೋಗಿಕವಾಗಿ ತೋರಿಸಿದರು.

ವೇದಿಕೆಯಲ್ಲಿ ಯೆನೆಪೋಯ ಆಯುರ್ವೇದ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ಶ್ರೀಧರ್ ಗೋಖಲೆಯವರು ಉಪಸ್ಥಿತರಿದ್ದರು. ದ್ರವ್ಯಗುಣ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಆಶಾ ಮಾರಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು. ದ್ರವ್ಯಗುಣ ವಿಜ್ಞಾನ ವಿಭಾಗದ ಪ್ರಾಧ್ಯಾಪಕರು, ಇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಸದುಪಯೋಗವನ್ನುಪಡೆದುಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು