News Karnataka Kannada
Tuesday, May 07 2024
ಕ್ಯಾಂಪಸ್

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ

Mani Balavikasa English Medium School secures second place in state-level Pratibha Karanji
Photo Credit : By Author

ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ ಡಿ.ವಿ.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ೨೦೨೨ – ೨೩ರ ಪ್ರೌಢ ವಿಭಾಗದ ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ೯ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಜ್ಮಾಲ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಇವರು ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಹಾಗೂ ರೂ ೪೦೦೦ ನಗದು ಬಹುಮಾನವನ್ನು ಪಡೆದಿರುತ್ತಾರೆ.

ಪಠ್ಯ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿರುವ ವಿದ್ಯ ಮೊಹಮ್ಮದ್ ಅಜ್ಮಾಲ್ ಮಾಣಿ ನಿವಾಸಿಗಳಾದ ಮೊಹಮ್ಮದ್ ಇಬ್ರಾಹಿಂ ಮತ್ತು ಝೈನಬಾ ದಂಪತಿಯ ಪುತ್ರ. ಈತನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಾಲಾ ಆಡಳಿತಾಧಿಕಾರಿ , ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು