ಮಂಗಳೂರು: ಜ. 30ರಂದು ಮಂಗಳೂರು ಮಿಲಾಗ್ರಿಸ್ ಕಾಲೇಜು ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಅಧ್ಯಾಪಕರಿಗಾಗಿ ಪುನಶ್ವೇತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಯೆನೆಪೋಯ ವಿಶ್ವವಿದ್ಯಾನಿಲಯ ಅಸೋಸಿಯೇಟ್ ಪ್ರೊಫೆಸರ್ ಡಾ. ನಿಯಾಝ್ ಪಣಕಜೆ ಇವರು”ಶೈಕ್ಷಣಿಕ ಬರಹಗಳು” ಎಂಬ ವಿಷಯದ ಮೇಲೆ ಮಾತಾಡಿ ಸಂಶೋಧನೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸುವುದು; ಸಂಘಟಿಸುವುದು ಮತ್ತು ರಚಿಸುವುದು; ಪರಿಶೀಲನೆ ಮತ್ತು ಮರು-ಕರಡು ರಚನೆಯ ಬಗ್ಗೆ ಅರಿವು ಮೂಡಿಸಿದರು.
ಅಧ್ಯಕ್ಷತೆ ವಹಿಸಿದ ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕರಾಗಿರುವ ವಂ. ಗುರು ಬೋನವೆಂಚೆರ್ ನಝರೆತ್
ಅಧ್ಯಾಪಕರಿಗೆ ಶುಭ ಹಾರೈಸಿದರು
ಪ್ರಾಂಶುಪಾಲ ವಂ. ಮೈಕಲ್ ಸಾಂತುಮಾಯೋರ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.