ಮೂಡುಬಿದಿರೆ: ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಆಂದೋಲನ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವ ಪರಿಸರ ದಿನದಂದು ಪುರಸಭೆಯ ನೇತೃತ್ವದಲ್ಲಿ ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಆಂದೋಲನ ಸೋಮವಾರ ನಡೆಯಿತು.

ಪುರಸಭಾ ಸದಸ್ಯೆ ಶ್ವೇತಾ ಪ್ರವೀಣ್ ಮತ್ತು ಸ್ಪೂರ್ತಿ ವಿಶೇಷ ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ಹಸಿರು ನಿಶಾನೆ ತೋರಿಸುವ ಮೂಲಕ ಸ್ವಚ್ಛತಾ ಆಂದೋಲನಕ್ಕೆ ಚಾಲನೆಯನ್ನು ನೀಡಿದರು.

ಪುರಸಭಾ ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ ಪರಿಕಲ್ಪನೆಯೊಂದಿಗೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಕಸ ಸಂಗ್ರಹಿಸುವಾಗಲೇ ಮೂರು ವಿಧದಲ್ಲಿ ಕಸ ವಿಂಗಡಣೆಯನ್ನು ಮಾಡಲಿದ್ದೇವೆ. ಮರುಬಳಕೆ ಆಗುವ ವಸ್ತುಗಳು, ಅಪಾಯಕಾರಿ ವಸ್ತುಗಳು, ಮರುಬಳಕೆಯಾಗದ ವಸ್ತುಗಳನ್ನು ಪ್ರತ್ಯೇಕವಾದ ಚೀಲಗಳಲ್ಲಿ ಹಾಕಲಾಗುತ್ತದೆ ಎಂದರು.

ನಂತರ ವಿಶೇಷ ಮಕ್ಕಳು ಶಾಲೆಯ ಪರಿಸರ, ಅರಮನೆಬಾಗಿಲು ಹಾಗೂ ಮೂಡುಬಿದಿರೆ ಹನುಮಂತ ದೇವಸ್ಥಾನದ ರಸ್ತೆಯ ಬದಿಗಳಲ್ಲಿ ಸ್ವಚ್ಛತೆಯನ್ನು ನಡೆಸಿದರು.

ಮುಖ್ಯ ಶಿಕ್ಷಕಿ ಶರ್ಮಿಳಾ ವಾಸ್ ಸ್ವಾಗತಿಸಿದರು. ಶಿಕ್ಷಕಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

32 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

32 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

51 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

56 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago