News Karnataka Kannada
Thursday, May 09 2024
ಮಂಗಳೂರು

ಮೂಡುಬಿದಿರೆ: ದೈಹಿಕ ಶಿಕ್ಷಣ ನಿರ್ದೇಶಕ, ಬೋಧಕರ ಸಂಘ ಉದ್ಘಾಟನೆ

Moodbidri: Director of Physical Education, Teachers' Association inaugurated
Photo Credit : News Kannada

ಮೂಡುಬಿದಿರೆ: ವಿಶ್ವವಿದ್ಯಾನಿಲಯದಲ್ಲಿ ಕ್ರೀಡೆಗೆ ಅಗತ್ಯವಿರುವ ಸಂಪನ್ಮೂಲವಿದ್ದು, ಅದರ ಸದ್ಬಳಕೆ ಆಗುತ್ತಿಲ್ಲ. 1383 ಸಂಯೋಜಿತ ಕಾಲೇಜುಗಳಲ್ಲಿ ಸಾಕಷ್ಟು ಕ್ರೀಡಾ ವಿದ್ಯಾರ್ಥಿಗಳಿದ್ದರೂ ದೈಹಿಕ ನಿರ್ದೇಶಕರ ಕೊರತೆ ಇದೆ. ಆರೋಗ್ಯಕ್ಕೆ ಮಹತ್ವ ನೀಡುವ ನೆಲೆಯಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ವಿಜ್ಞಾನ ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕು.ಆರೋಗ್ಯ ವಿಜ್ಞಾನ ಕಾಲೇಜುಗಳ ಕ್ರೀಡಾ ಮೀಸಲಾತಿಯುಳ್ಳ ವಿದ್ಯಾರ್ಥಿಗಳ ಸಾಧನೆಯನ್ನು ಸಂಬಂಧಿಸಿದ ಇಲಾಖೆಗಳು ಅವಲೋಕಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು.

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯೋಜಿತ ಕಾಲೇಜುಗಳ ಕರ್ತವ್ಯನಿರತ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಬೋಧಕರ ಸಂಘ ಉದ್ಘಾಟಿಸಿ ಮಾತನಾಡಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯು ತನ್ನ ಸಿಂಡಿಕೇಟ್ ಸದಸ್ಯರಾಗಲು ದೈಹಿಕ ನಿರ್ದೇಶಕರಿಗೂ ಅವಕಾಶ ನೀಡುವುದರಿಂದ ಕ್ರೀಡಾ ವಿಭಾಗದ ಸಾಧಕ ಭಾದಕಗಳನ್ನು ಚರ್ಚಿಸಲು ಅವಕಾಶ ನೀಡಿದಂತಾಗುತ್ತದೆ. ಅಲ್ಲದೆ ಕ್ರೀಡಾ ಮೀಸಲಾತಿಯಿಂದ ವೈದ್ಯಕೀಯ ಸೀಟು ಪಡೆದ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಪ್ರೋತ್ಸಾಹ ನೀಡಬೇಕು. ಈ ಮೂಲಕ ಸಂಘರ್ಷಕ್ಕೆ ದಾರಿ ಮಾಡದೆ ಸೌಹಾರ್ದತೆಯಿಂದ ಸಂಘಟನೆ ಮುಂದುವರಿಯಬೇಕು ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಸಿಂಡಿಕೇಟ್ ಸದಸ್ಯ ಡಾ. ಆನಂದ್ ಎಸ್. ಕಿರಿಶಾಲ್ ಮುಖ್ಯ ಅತಿಥಿಯಾಗಿದ್ದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಸಂಯೋಜಿತ ಕಾಲೇಜುಗಳ ಕರ್ತವ್ಯನಿರತ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಬೋಧಕರುಗಳ ಸಂಘದ ಅಧ್ಯಕ್ಷ ಡಾ. ಜೋಸೆಫ್ ಅನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಡಾ. ಮಧು, ಕಬಡ್ಡಿ ಕಾರ್ಯಾಗಾರ ನಡೆಸಿಕೊಟ್ಟರು.

ಡಾ. ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಜಯಕುಮಾರ್, ದಾವಣಗೆರೆಯ ಜೆಜೆಎಂ ಸಂಸ್ಥೆಯ ಗೋಪಾಲ ಕೃಷ್ಣ, ದಾವಣಗೆರೆಯ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ನ ದೈಹಿಕ ನಿರ್ದೇಶಕ ಮಹೇಶ್, ಎಜೆ ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಹರೀಶ್ ಗೌಡ, ಆಳ್ವಾಸ್ ಸಂಸ್ಥೆಯ ದೈಹಿಕ ನಿರ್ದೇಶಕ ಅವಿನಾಶ್ ಎಸ್ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಡ್ಯ ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಡಾ. ಸುರೇಶ್ ಸ್ವಾಗತಿಸಿದರು. ಶಿವಮೊಗ್ಗ ಮೆಡಿಕಲ್ ಕಾಲೇಜಿನ ದೈಹಿಕ ನಿರ್ದೇಶಕ ಡಾ. ರಮೇಶ್ ನಾಯಕ್ ವಂದಿಸಿದರು. ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗೀಶ್ ಕೈರೋಡಿ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು