ಮೈಸೂರು: ಇಂದು ನಗರದ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯವು ತನ್ನ ಬೆಳ್ಳಿ ಹಬ್ಬ ಆಚರಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮ್ಯಾರಥಾನ್ ನನ್ನು ಆಯೋಜಿಸಲಾಗಿತ್ತು.
ವನ್ಯಜೀವಿ ಸಂರಕ್ಷಣಾ ಕುರಿತು ಅರಿವು ಮೂಡಿಸಲು ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು 6ಕೆ ಮ್ಯಾರಥಾನ್ ನಲ್ಲಿ ಪಾಲ್ಗೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನ ಮಾಡಿದರು.
ಇದೆ ಸಂದರ್ಭದಲ್ಲಿ ಎನ್ ಎಸ್ ಎಸ್ ಮತ್ತು ರೆಡ್ ಕ್ರಾಸ್ ಯೂಥ್ ವಿಂಗ್ ನಾ ವಿದ್ಯಾರ್ಥಿನಿ ಅಪೇಕ್ಷಾ ಮಾತನಾಡಿ ” ಇತ್ತೀಚಿಗೆ ಮೈಸೂರು, ಬೆಂಗಳೂರು ಹಾಗೂ ರಾಜ್ಯದ ಹಲವಡೆ ಚಿರತೆ, ಆನೆ ಮತ್ತು ಮಾನವರ ನಡುವೆ ಸಂಘರ್ಷ ಹೆಚ್ಚುತಿದ್ದುಆದರ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಹಾಗೂ ತಡೆಗಟ್ಟಲು ಬೇಕಾಗಿರುವ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಗಮನ ಹರಿಸಬೇಕು ಎನ್ನುವ ಉದ್ದೇಶದಿಂದ ಈ ಮ್ಯಾರಥಾನ್ ಆಯೋಜಿಸಿದ್ದೇವೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಬಿ ಸದಾಶಿವೇಗೌಡ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.